ಪ್ರಯಾಗರಾಜ್: ಮಹಾಕುಂಭ ಮೇಳದಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಪತ್ನಿ ಸಮೇತರಾಗಿ ರವಿವಾರ(ಫೆ9) ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ರವಿವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಡಿ.ಕೆ.ಶಿವಕುಮಾರ್ ಅವರು ಕೆಲವು ಸಾಧು ಸಂತರೊಂದಿಗೆ ಪವಿತ್ರ ಸ್ನಾನ ಮಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ“ಕುಂಭಮೇಳವನ್ನು ಅತ್ಯಂತ ಪವಿತ್ರವಾಗಿ ನಡೆಸಿದ ಎಲ್ಲಾ ಸಂಘಟಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇದು ಒಬ್ಬರ ಜೀವನದಲ್ಲಿ ಬರುವ ಒಂದು ಐತಿಹಾಸಿಕ ಕ್ಷಣವಾಗಿದೆ’ ಎಂದರು.
“ಇಲ್ಲಿಗೆ ಬಂದಿರುವ ಕೋಟಿಗಟ್ಟಲೆ ಜನರು ಎಲ್ಲಾ ವ್ಯವಸ್ಥೆಗಳನ್ನು ನೋಡುತ್ತಿದ್ದಾರೆ. ಇದು ಸಣ್ಣ ಕೆಲಸವಲ್ಲ ಎಂದು ನನಗೆ ತಿಳಿದಿದೆ. ಸಂಘಟನೆ ಹೇಗೆ ನಡೆಯುತ್ತದೆ ಎಂದು ನನಗೆ ತಿಳಿದಿದೆ” ಎಂದರು.













































