ಇನ್ಮುಂದೆ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಬೀಳಲಿದೆ ಕತ್ತರಿ | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Picture of Savistara

Savistara

Bureau Report

ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ, ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂದ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸ‌ರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ. ಈ ಹಿನ್ನೆಲೆ ಆರೋಗ್ಯ ಸಚಿವರು ಕ್ರಮ ಕೈಗೊಂಡಿದ್ದಾರೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!