ಮಾ.15ರಿಂದ ಎಪ್ರಿಲ್ 30ರವರೆಗೆ ಶಿರಾಡಿ ಘಾಟ್ ವಾಹನ ಸಂಚಾರ ಬಂದ್‌?

Picture of Savistara

Savistara

Bureau Report

ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.

ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ. ಎಂಬಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ 383 ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.ಸಕಲೇಶಪುರದ ದೋಣಿಗಲ್ ಕ್ರಾಸ್‌ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿದ್ದಾರೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!