ಶಿರಾಡಿ ಘಾಟಿಯಲ್ಲಿ ಏಕಮುಖ ಸಂಚಾರ: ಎಷ್ಟು ದಿನ, ವಿವರ ಇಲ್ಲಿದೆ

Picture of Savistara

Savistara

Bureau Report

ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು. ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.

ಸಕಲೇಶಪುರ: ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಜಿಲ್ಲಾಡಳಿತ ಮಾ. 15ರಿಂದ ಏಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಬದಲು ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.

ಚತುಷ್ಪಥ ಕಾಂಕ್ರಿಟ್ ರಸ್ತೆ ನಿರ್ಮಿಸುತ್ತಿರುವುದರಿಂದ ಒಂದು ಪಥಕ್ಕೆ ಕಾಂಕ್ರಿಟ್ ಹಾಕಿದಾಗ ಅದರ ಕ್ಯೂರಿಂಗ್‌ಗೆ 25 ದಿನಗಳು ಬೇಕು. ಹೀಗಾಗಿ ಈ ವೇಳೆ ವಾಹನ ಸಂಚಾರ ನಿಷೇಧ ಮಾಡಬೇಕಾಗುತ್ತದೆ ಎಂದು ಗುತ್ತಿಗೆದಾರರಾದ ಸಂಸದ ಶ್ರೇಯಸ್ ಎಂ.ಪಟೇಲ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಗುಂಡ್ಯದಿಂದ ಸಕಲೇಶಪುರಕ್ಕೆ 40ಕಿ.ಮೀ.ಇದ್ದು. ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗೂ ರಸ್ತೆ ಕಾಮಗಾರಿ ಮುಗಿದಿದೆ. ಮಾರನಹಳ್ಳಿ, ದೊಡ್ಡ ತಪ್ಪಲು, ದೋಣಿಗಲ್ ಗ್ರಾಮದವರೆಗೂ ಅಲ್ಲಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಚತುಷ್ಪಥ ಕಾಂಕ್ರಿಟ್ ರಸ್ತೆ ನಿರ್ಮಾಣ ಸಂಬಂಧ ಈವರೆಗೆ 4.8 ಕಿ.ಮೀ. ರಸ್ತೆ ಕಾಮಗಾರಿ ಮುಗಿದಿದ್ದು, ದೊಡ್ಡ ತಪ್ಪಲು ಗ್ರಾಮದ ಬಳಿ ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆಗೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ.

ಸಕಲೇಶಪುರ-ಶಿರಾಡಿ ಮಾರ್ಗದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ರಸ್ತೆ ಬಂದ್‌ ಮಾಡಿದರೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ, ವಹಿವಾಟು ಸೇರಿದಂತೆ ಧಾರ್ಮಿಕ ಕ್ಷೇತ್ರಗಧಿಳಿಗೆ ಸಂಪರ್ಕ ಬಂದ್ ಆದಂತಾಗುತ್ತದೆ.ಏಕಮುಖ ಸಂಚಾರ ವ್ಯವಸ್ಥೆ:ಕಾಮಗಾರಿಗಾಗಿ ಹೆದ್ದಾರಿ ಬಂದ್‌ ಬದಲು ದೋಣಿಗಾಲ್‌ನಿಂದ ಕಪ್ಪಳ್ಳಿವರೆಗೆ ಏಕಮುಖ ಸಂಚಾರ ವ್ಯವಸ್ಥೆಗೆ ಜಿಲ್ಲಾಡಳಿತ ನಿರ್ಧರಿಸಿದೆ. ದೋಣಿಗಾಲ್, ಮಂಜರಾಬಾದ್ ಕೋಟೆ ಮುಂಭಾಗ ತುಂಬಾ ಕಡಿದಾದ ಇಳಿಜಾರು ಇರುವುದರಿಂದ ಆ ಸ್ಥಳದಲ್ಲಿ ಮಳೆಗಾಲ ಪ್ರಾರಂಭ ಆಗುವುದರೊಳಗೆ ಕಾಮಗಾರಿ ಶೀಘ್ರ ಮುಗಿಸುವಂತೆ ಹೆದ್ದಾರಿ ಎಂಜಿನಿಯರ್‌ಗಳಿಗೆ ಜಿಲ್ಲಾಡಳಿತ ಆದೇಶಿಸಿದೆ ಎನ್ನಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಏಕಮುಖ ಸಂಚಾರಕ್ಕೆ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಾರ್ಗದಲ್ಲಿ ಹಿಂದಿನ ವರ್ಷ ಬಂದ್ ಮಾಡಿದ್ದರಿಂದ ಪ್ರಯಾಣಿಕ ವಾಹನ ಹಾಗೂ ಸರಕು ಸಾಗಣೆಗೆ ಭಾರಿ ಸಮಸ್ಯೆ ಉಂಟಾಗಿತ್ತು. ಆದ್ದರಿಂದ ಈ ವರ್ಷ ವಾಹನಗಳ ಸಂಚಾರ ಬಂದ್‌ ಮಾಡುವುದಿಲ್ಲ. ಕಾಮಗಾರಿ ನಡೆಯುವ ಸ್ಥಳದಲ್ಲಿಏಕಮುಖ ಸಂಚಾರ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಏಕಮುಖ ಸಂಚಾರದ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದಿದ್ದಾರೆ ಸಕಲೇಶಪುರ ಉಪವಿಭಾಗಾಧಿಕಾರಿ ಶ್ರುತಿ.ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದರಿಂದ ಈ ಭಾಗದಲ್ಲಿ ಪ್ರತಿನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತದೆ. ಜಿಲ್ಲಾಡಳಿತ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದಾರೆ ಸಕಲೇಶಪುರ ಕ್ಷೇತ್ರ ಶಾಸಕ ಸಿಮೆಂಟ್ ಮಂಜು.

[t4b-ticker]
error: Content is protected !!