ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್‌ ನಟಿ ಕತ್ರಿಕಾ ಕೈಫ್‌ ಭೇಟಿ; ಸಂತಾನ ಭಾಗ್ಯಕ್ಕಾಗಿ ಸರ್ಪ ಸಂಸ್ಕಾರ ಸೇವೆ!

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್‌ ನಟಿ ಕತ್ರಿನಾ ಕೈಫ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟಿ ಕತ್ರಿಕಾ ಕೈಫ್‌ ಯಾಗ ಶಾಲೆಯಲ್ಲಿ ಸರ್ಪಸಂಸ್ಕಾರ ಸೇವೆ ಮಾಡಿಸಿದ್ದಾರೆ. ಇಂದು ಮತ್ತು ನಾಳೆ ವಿಶೇಷ ಸೇವೆ ನಡೆಯಲಿದೆ ಎನ್ನಲಾಗಿದೆ.

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್‌ ನಟಿ ಕತ್ರಿನಾ ಕೈಫ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ತಡರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಕತ್ರಿನಾ ಕೈಫ್, ಇಂದು (ಮಾ.11) ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ನಟಿ ಕತ್ರಿಕಾ ಕೈಫ್‌ ಕುಟುಂಬ ಸಮೇತರಾಗಿ ಆಗಮಿಸಿ ಯಾಗ ಶಾಲೆಯಲ್ಲಿ ಸರ್ಪಸಂಸ್ಕಾರ ಸೇವೆ ಮಾಡಿಸಿದ್ದಾರೆ. ನಾಳೆಯೂ ವಿಶೇಷ ಸೇವೆ ನಡೆಯಲಿದೆ ಎನ್ನಲಾಗಿದೆ.

ನಾಗದೋಷ, ಸಂಕಷ್ಟಗಳ ಪರಿಹಾರ ಹಾಗೂ ಸಂತಾನ ಭಾಗ್ಯಕ್ಕಾಗಿ ಕತ್ರಿನಾ ಕೈಫ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ್ದಾರೆ ಎನ್ನಲಾಗಿದೆ.ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳಲ್ಲಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!