ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣದಿಂದಾಗಿ ಉಡುಪಿ, ಹಾಸನ, ಚಿಕ್ಕಮಗಳೂರು, ದ.ಕ, ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಮೊನ್ನೆ ತಾನೇ ಬಿಸಿಲಿನ ಧಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿ ಮಳೆ ಬಂದು ಭೂಮಿ ತಂಪಾಗಿದೆ. ಅನೇಕ ಕಡೆ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿತ್ತು. ಇದೀಗ ಮತ್ತೆ ಮಳೆ ಮುನ್ಸೂಚನೆ ನೀಡಿದೆ.ಇನ್ನು ಉತ್ತರ ಕರ್ನಾಟಕ ಅನೇಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಯುಭಾರ ಕುಸಿತ ಎಫೆಕ್ಟ್|ಉಡುಪಿ, ದ.ಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ…!
Savistara
Bureau Report
[t4b-ticker]













































