ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು

Picture of Savistara

Savistara

Bureau Report

ಇಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಕುರಿತು ವಿಧಾನ ಪರಿಷತ್ತಿನಲ್ಲಿ ಗಂಭೀರವಾಗಿ ಚರ್ಚಿಸಿದರು. ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದ ವ್ಯಾಪಾರ ಹಾಗೂ ಸಾರಿಗೆ ವ್ಯವಸ್ಥೆ ತೀವ್ರ ಅಡಚಣೆಯಾಗುತ್ತಿದೆ ಎಂದು ಅವರು ಉಲ್ಲೇಖಿಸಿದರು.ಈ ಹಿಂದೆ ಮಾನ್ಯ ಉಪಮುಖ್ಯಮಂತ್ರಿಗಳು “ಮಂಗಳೂರು ಸಂಜೆ 8 ಗಂಟೆಗೆ ಬಂದ್ ಆಗುತ್ತದೆ” ಎಂದು ಹೇಳಿದ ಕಾರಣಕ್ಕೂ ಸಮರ್ಪಕ ರಸ್ತೆ ಸಂಪರ್ಕದ ಅಭಾವವೇ ಕಾರಣ ಎಂಬುದಾಗಿ ಶಾಸಕರು ಪರಿಷತ್ತಿನಲ್ಲಿ ತಿಳಿಸಿದ್ದಾರೆ.ಬೆಂಗಳೂರು-ಮಂಗಳೂರು ನಡುವಿನ ರಸ್ತೆ ಸಮಸ್ಯೆಯಿಂದಾಗಿ, ಬೆಂಗಳೂರು ಜನರು ಮಾಸ್ತ್ಯಾಹಾರವನ್ನು ಮಂಗಳೂರಿನ ಬದಲಿಗೆ ಚೆನ್ನೈ ಅಥವಾ ಆಂಧ್ರದಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಇದರ ಪ್ರಮುಖ ಕಾರಣ ಕಡಿದಾದ ರಸ್ತೆ ಮತ್ತು ಅತಿಯಾದ ಸಾರಿಗೆ ವೆಚ್ಚ. ಇದೇ ತೊಂದರೆ ಬೆಂಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಾಟಕ್ಕೂ ಹಿನ್ನಡೆಯಾಗುತ್ತಿದೆ.ಸಚಿವರು ಚತುಷ್ಪಥ ರಸ್ತೆ ನಿರ್ಮಾಣದ ಭರವಸೆ ನೀಡಿದರೂ, ಜಿಲ್ಲಾಧಿಕಾರಿಗಳು ಕೆಲವು ಪ್ರದೇಶಗಳಲ್ಲಿ ಅನುಮತಿ ನೀಡುತ್ತಿಲ್ಲ ಎಂದು ಲಿಖಿತವಾಗಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಸಂಸದರಾದ ಶ್ರೀ ಬೃಜೇಶ್ ಚೌಟ ಅವರು ಕೇಂದ್ರ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಕೇಂದ್ರ ಸಾರಿಗೆ ಸಚಿವರು, ಸ್ಥಳೀಯ ಅರಣ್ಯ ಇಲಾಖೆ ಸಮಯಕ್ಕೆ ಸರಿಯಾಗಿ ಅನುಮತಿ ನೀಡುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ.ಈ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು ಗಂಭೀರವಾಗಿ ಪರಿಗಣಿಸಿ, ಸ್ಥಳೀಯ ಶಾಸಕರು, ಸಂಸದರು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!