ಸಂವಿಧಾನ ಬಾಹಿರವಾಗಿ ಮುಸಲ್ಮಾನರಿಗೆ 4% ಮೀಸಲಾತಿ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಾಲ ಅವರ ನೇತೃತ್ವದಲ್ಲಿ, ಸಂಸದರಾದ ಗೋವಿಂದ ಕಾರಜೋಳ ಅವರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತೀ ಶೆಟ್ಟಿ, ಮಾಜಿ ಶಾಸಕರಾದ ಸಂಜೀವ ಮಠದೂರ್, ರಾಜ್ಯ ಹಿಂದುಳಿದ ಮೋರ್ಚಾದ ಪದಾಧಿಕಾರಿ ಆರ್ಸಿ ನಾರಾಯಣ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಶೆಟ್ಟಿ, ಜಿಲ್ಲೆಯ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಮೋರ್ಚಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪ್ರಕೋಷ್ಠ ಸದಸ್ಯರು ಉಪಸ್ಥಿತರಿದ್ದರು.














































