ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ಸರ್ಕಾರಿ ಗುತ್ತಿಗೆಯಲ್ಲಿ 4% ಧರ್ಮಾಧಾರಿತ ಮೀಸಲಾತಿಯು ಹಿಂದೂ ವಿರೋಧಿ, ದಲಿತ ವಿರೋಧಿ ನೀತಿಯಾಗಿದ್ದು ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ.

ಹಾಗಾಗಿ ಈ ಮಸೂದೆಯನ್ನು ಅಂಗೀಕಾರ ಮಾಡಬಾರದೆಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷರಾದ ಶ್ರೀ ದೀಪಕ್ ರಾಜಗೋಪಾಲ್ ಹಾಗೂ ಪ್ರಾಂತ ಕಾರ್ಯದರ್ಶಿಗಳಾದ ಶ್ರೀ ಜಗನ್ನಾಥ ಶಾಸ್ತ್ರಿ ನೇತೃತ್ವದ ತಂಡವು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕರ್ನಾಟಕದ ರಾಜ್ಯಪಾಲರು ಸೂಕ್ತ ಕಾನೂನಿನ ಚೌಕಟ್ಟಿನಲ್ಲಿ ಈ ವಿಷಯವನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.













































