ಸುಳ್ಯ ತಾಲೂಕಿನ ಕನಕಮಜಲು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗಳಲ್ಲಿ ತೆರವಾದ ಸ್ಥಾನಗಳಿಗೆ ಮೇ.11ರಂದು ಚುನಾವಣೆ ನಡೆಯಲಿದೆ.ಈ ಕುರಿತು ಜಿಲ್ಲಾಧಿಕಾರಿಗಳು ಎ.22ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಎ.28 ಕೊನೆಯ ದಿನವಾಗಿದೆ. ಎ.29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮೇ.2 ಕಡೆಯ ದಿನವಾಗಿದೆ. ಮೇ.11ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡಯಲಿದೆ. ಮೇ.14ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದು.ಸುಬ್ರಹ್ಮಣ್ಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಶ್ರೀಮತಿ ಭಾರತಿಯವರು ಗ್ರಾ.ಪಂ. ಸಾಮಾನ್ಯ ಸಭೆಗಳಿಗೆ ನಿರಂತರ ಹಾಜರಾಗದೇ ಇದ್ದುದರಿಂದ ಅವರ ಸದಸ್ಯ ಸ್ಥಾನ ರದ್ದಾಗಿತ್ತು.
ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ರವಿಚಂದ್ರ ಕಾಪಿಲರವರು ಅನಾರೋಗ್ಯದಿಂದ ನಿಧನರಾದ ಬಳಿಕ ಸದಸ್ಯ ಸ್ಥಾನ ತೆರವಾಗಿದೆ.













































