ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ನಾಯಕರ ಒತ್ತಡದಿಂದ ರದ್ದುಗೊಳಿಸಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಖಂಡಿಸಿದ್ದಾರೆ. ಆರೋಗ್ಯ ಜನಸಾಮಾನ್ಯರ ಅಗತ್ಯತೆಯಲ್ಲೊಂದು ಈ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಯಂತ್ರ ಉದ್ಘಾಟನೆಯಾಗಬೇಕಿತ್ತು ಆದರೆ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕಾಂಗ್ರೆಸ್ ನ ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಸೂಡ ಅಧ್ಯಕ್ಷರನ್ನು ಆಮಂತ್ರಣ ಪತ್ರದಲ್ಲಿ ಹೆಸರಿಲ್ಲವೆಂಬ ಕಾರಣಕ್ಕೆ ಡಿಹೆಚ್ ಓ ಗೆ ದೂರು ನೀಡಿ ಇದೀಗ ಕಾರ್ಯಕ್ರಮ ರದ್ದುಗೊಂಡಿದೆ ಇಂತಹ ಆರೋಗ್ಯ ಸಂಭಂಧಿತ ಉದ್ಘಾಟನಾ ವಿಚಾರಗಳಲ್ಲಿ ಚಿಲ್ಲರೆ ರಾಜಕೀಯ ತಂದಿರುವುದನ್ನು ಬಿಜೆಪಿ ಖಂಡಿಸುತ್ತದೆ,ಕ್ಷೇತ್ರದ ಜನಸಾಮಾನ್ಯರು ನಿಮ್ಮ ಈ ವರ್ತನೆಗೆ ತಕ್ಕದಾದ ಉತ್ತರ ನೀಡಲಿದ್ದಾರೆ.ನಿಮಗೆ ಈ ವಿಚಾರವಾಗಿ ಬೇರೆ ರೀತಿಯ ಅವಕಾಶಗಳಿದ್ದರು ಸರ್ಕಾರ ಮಟ್ಟದಲ್ಲಿ ಒತ್ತಡ ಹೇರಿ ಕಾರ್ಯಕ್ರಮವನ್ನು ರದ್ದುಪಡಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ತಕ್ಕುದಾದಲ್ಲ, ಅಭಿವೃದ್ಧಿ ವಿಚಾರವಾಗಿ ರಾಜಕೀಯ ಮಾಡಿ ಆದರೆ ಆರೋಗ್ಯ ಸಂಬಂಧಿತ ವಿಚಾರದಲ್ಲಿ ಈ ನಡವಳಿಕೆ ಸರಿಯಲ್ಲವೆಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಲೂಕು ಶಸ್ತ್ರ ಚಿಕೆತ್ಸೆ ಯಂತ್ರ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ | ಜನಸಾಮಾನ್ಯರ ಅಗತ್ಯತೆ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ : ವೆಂಕಟ್ ವಳಲಂಬೆ
Savistara
Bureau Report
[t4b-ticker]













































