ಶ್ರೀಲಂಕಾದಲ್ಲಿರುವ ಭಾರತದ ಮೂಲದ ತಮಿಳಿಗರಿಗೆ ಮನೆ ನಿರ್ಮಾಣ ಭರವಸೆ: ಪ್ರಧಾನಿ ಮೋದಿ

Picture of Savistara

Savistara

Bureau Report

ದಶಕದಗಳಿಂದಲೂ ತಮಿಳುನಾಡಿನಿಂದ ವಲಸೆ ಬಂದು ಶ್ರೀಲಂಕಾದಲ್ಲಿ ನೆಲೆಸಿರುವ ಭಾರತ ಮೂಲದ ತಮಿಳುಗರಿಗೆ 10,000 ಮನೆ ನಿರ್ಮಿಸಿ ಕೊಡುವುದಾಗಿ, ಮತ್ತು ಅದರ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಭಾರತ ಸರ್ಕಾರ ತಮಿಳುನಾಡು ಮತ್ತು ಶ್ರೀಲಂಕಾದಲ್ಲಿರುವ ಭಾರತದ ಜನರ ನಡುವೆ ಶಾಂತಿಪೂರ್ಣ ಸಂಬಂಧವನ್ನು ಕಾಪಾಡಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮೊದಲ ಹೆಜ್ಜೆಯನ್ನು ಇಟ್ಟಿದೆ. ಶ್ರೀಲಂಕಾ ಸರ್ಕಾರವು ತಮಿಳರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಸಂವಿಧಾನತ್ಮಕವಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.

ಕೊಲಂಬೊ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಜೊತೆಗೆ ಶ್ರೀಲಂಕಾದಲ್ಲಿರುವ ಭಾರತ ಮೂಲದ ತಮಿಳುನಾಡಿನ ಜನಕ್ಕೆ ದಶಕಗಳ ನಂತರ ಸಿಹಿಸುದ್ದಿ ನೀಡಿದ್ದಾರೆ. ಶ್ರೀಲಂಕಾದಲ್ಲಿ ಸ್ವಂತ ನೆಲೆ ರೂಪಿಸುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ.

ದಶಕದಗಳಿಂದಲೂ ತಮಿಳುನಾಡಿನಿಂದ ವಲಸೆ ಬಂದು ಶ್ರೀಲಂಕಾದಲ್ಲಿ ನೆಲೆಸಿರುವ ಭಾರತ ಮೂಲದ ತಮಿಳುಗರಿಗೆ 10,000 ಮನೆ ನಿರ್ಮಿಸಿ ಕೊಡುವುದಾಗಿ, ಮತ್ತು ಅದರ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಭಾರತ ಸರ್ಕಾರ ತಮಿಳುನಾಡು ಮತ್ತು ಶ್ರೀಲಂಕಾದಲ್ಲಿರುವ ಭಾರತದ ಜನರ ನಡುವೆ ಶಾಂತಿಪೂರ್ಣ ಸಂಬಂಧವನ್ನು ಕಾಪಾಡಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಮೊದಲ ಹೆಜ್ಜೆಯನ್ನು ಇಟ್ಟಿದೆ. ಶ್ರೀಲಂಕಾ ಸರ್ಕಾರವು ತಮಿಳರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಮತ್ತು ಸಂವಿಧಾನತ್ಮಕವಾಗಿ ಕೆಲಸ ಮಾಡುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು. ಪ್ರಧಾನಿ ಮೋದಿ ಹಾಗೂ ದಿಸ್ಸನಾಯಕೆ ಮಧ್ಯೆ ವಿಸ್ತೃತವಾದ ಮಾತುಕತೆಯ ಬಳಿಕ ಏಳು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು.

ರಾಜೀವ್ ಗಾಂಧಿ ಹತ್ಯೆಯ ನಂತರ ಭಾರತದ ಭದ್ರತಾ ನೀತಿ ಬದಲಾಗಿದ್ದು, ತಮಿಳುನಾಡು ಮತ್ತು ಶ್ರೀಲಂಕಾ ನಡುವಿನ ಸಂಬಂಧಕ್ಕೆ ಧಕ್ಕೆಯಾಯಿತು.ರಾಜೀವ್ ಗಾಂಧಿಯ ಹತ್ಯೆ ಭಾರತ-ಶ್ರೀಲಂಕಾ ಸಂಬಂಧಗಳ ಇತಿಹಾಸದಲ್ಲಿ ಒಂದು ಕಪ್ಪು ಅಧ್ಯಾಯವಾಗಿದೆ. ಇದು ರಾಜಕೀಯ, ಸಾಮಾಜಿಕ, ಮತ್ತು ಭದ್ರತಾ ಪರಿಪ್ರೇಕ್ಷ್ಯಗಳಲ್ಲಿ ದೀರ್ಘಕಾಲೀನ ಪರಿಣಾಮಗಳನ್ನು ಉಂಟುಮಾಡಿತು. ಸದ್ಯ ದಿಸ್ಸಾನಾಯಕೆ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಮೊದಲ ವಿದೇಶಿ ನಾಯಕನಾಗಿ ಭೇಟಿ ನೀಡಿರುವುದು ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗುವ ಸಾಧ್ಯತೆ ಇದೆ.

ಶ್ರೀಲಂಕಾಕ್ಕೆ ‘ವಿಶೇಷ’ ಸ್ಥಾನವಿದೆಕೊಲಂಬೊದಲ್ಲಿ ರಕ್ಷಣಾ ಒಪ್ಪಂದಕ್ಕೂ ಸಹಿ ಹಾಕಲಾಯಿತು. ನಮ್ಮ ರಕ್ಷಣಾ ಹಿತಾಸಕ್ತಿಗಳು ಒಂದೇ ಆಗಿವೆ ಎಂದು ನಾವು ನಂಬುತ್ತೇವೆ. ಎರಡೂ ದೇಶಗಳ ಭದ್ರತೆ ನಂಟು ಹೊಂದಿದ್ದು, ಪರಸ್ಪರ ಅವಲಂಬಿತವಾಗಿವೆ. ಭಾರತದ ನೆರೆಹೊರೆಯ ರಾಷ್ಟ್ರ ಮೊದಲು ನೀತಿ ಹಾಗೂ ‘ಮಹಾಸಾಗರ’ ದೂರದೃಷ್ಟಿಯಲ್ಲಿ ಶ್ರೀಲಂಕಾಕ್ಕೆ ‘ವಿಶೇಷ’ ಸ್ಥಾನವಿದೆ ಎಂದು ಪ್ರಧಾನಿ ಮೋದಿ ಮಾತನಾಡಿದರು.

ಮೀನುಗಾರರ ಬಿಡುಗಡೆಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ವಿಷಯದಲ್ಲಿ ಮಾನವೀಯ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಲು ಮತ್ತು ಅವರ ದೋಣಿಗಳನ್ನು ಹಿಂದಿರುಗಿಸಲು ಒತ್ತಿ ಹೇಳಿದರು. ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧವು ಪರಸ್ಪರ ನಂಬಿಕೆ ಮತ್ತು ಸದ್ಭಾವನೆಯನ್ನು ಆಧರಿಸಿದೆ ಎಂದು ಅವರು ಹೇಳಿದರು.

2024 ರಲ್ಲಿ ದಿಸ್ಸಾನಾಯಕೆ ಭಾರತಕ್ಕೆ ಭೇಟಿ ನೀಡಿದ್ದನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು. ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ತಮ್ಮ ಮೊದಲ ವಿದೇಶಿ ಭೇಟಿಗಾಗಿ ಭಾರತವನ್ನು ಆಯ್ಕೆ ಮಾಡಿಕೊಂಡರು. ಇಂದು ನಾನು ಅವರ ಮೊದಲ ವಿದೇಶಿ ಅತಿಥಿಯಾಗಿ ಶ್ರೀಲಂಕಾಗೆ ಬಂದಿದ್ದೇನೆ. ಇದು ನಮ್ಮ ವಿಶೇಷ ಸಂಬಂಧದ ಆಳವನ್ನು ತೋರಿಸುತ್ತದೆ ಎಂದು ಮೋದಿ ಹೇಳಿದರು.

ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳಲ್ಲಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಶ್ರೀಲಂಕಾ ತನ್ನ ಪ್ರದೇಶವನ್ನು ಯಾವುದೇ ರೀತಿಯಲ್ಲಿ ಬಳಕೆ ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿಗೆ ಭರವಸೆ ನೀಡಿದ್ದೇನೆ. 2022ರಲ್ಲಿ ತೀವ್ರ ಆರ್ಥಿಕ ಹಿಂಜರಿತದಿಂದ ನಲುಗಿ ಹೋಗಿರುವ ಶ್ರೀಲಂಕಾ ಈಗ ಸಾಲದ ಸುಳಿಯಲ್ಲಿದೆ. ಸದ್ಯ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳುತ್ತಿದೆ. ನಮ್ಮ ಆರ್ಥಿಕ ಚೇತರಿಕೆ, ಬೆಳವಣಿಗೆ ಮತ್ತು ಸ್ಥಿರತೆಗೆ ಶ್ರೀಲಂಕಾಕ್ಕೆ ನೀಡಿದ ಅಮೂಲ್ಯ ಬೆಂಬಲಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ದಿಸ್ಸನಾಯಕೆ ತಿಳಿಸಿದ್ದಾರೆ.

ಶ್ರೀಲಂಕಾದ ಅತ್ಯುನ್ನತ ನಾಗರಿಕ ಗೌರವ ‘ಮಿತ್ರ ವಿಭೂಷಣʼಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ನಾಗರಿಕ ಗೌರವ ‘ಮಿತ್ರ ವಿಭೂಷಣ’ ಅನ್ನು ನೀಡಿ ಗೌರವಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ. ಶ್ರೀಲಂಕಾ ಜತೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯನ್ನು ಗುರುತಿಸಿ ದ್ವೀಪ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶ್ರೀಲಂಕಾ ಮಿತ್ರ ವಿಭೂಷಣ ಪ್ರಶಸ್ತಿ ಪಡೆದಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಈ ಗೌರವ ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಇದು ಭಾರತ ಹಾಗೂ ಶ್ರೀಲಂಕಾ ನಡುವಣ ಸ್ನೇಹ ಹಾಗೂ ಚಾರಿತ್ರಿಕ ಬಾಂಧವ್ಯವನ್ನು ಸಂಕೇತಿಸುತ್ತದೆ. ಈ ಗೌರವಕ್ಕಾಗಿ ಶ್ರೀಲಂಕಾದ ಅಧ್ಯಕ್ಷರು, ಸರ್ಕಾರ ಹಾಗೂ ಜನರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಮಾತನಾಡಿದರು.

[t4b-ticker]
error: Content is protected !!