ಮಂಗಳೂರಿನ ಬಾವುಟಗುಡ್ಡೆಯಲ್ಲಿ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ

Picture of Savistara

Savistara

Bureau Report

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ, ಸಂಘಟನ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಎ. 5 ರಂದು ನಡೆಯಿತು.

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್,

ಸಂಸದ ಬ್ರೀಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ,

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಪ್ರವೀಣ್ ಚಂದ್ರ ಆಳ್ವ, ಎಸಿ ವಿನಯ್ ರಾಜ್ ,ಕಿರಣ್ ಚಂದ್ರ ಪುಷ್ಪಗಿರಿ, ಡಾ ಸಚಿನ್ ನಡ್ಕ ಹಾಗೂ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರುಗಳು ರಾಷ್ಟ್ರಾಭಿಮಾನಿಗಳು ಭಾಗವಹಿಸಿದ್ದರು.

[t4b-ticker]
error: Content is protected !!