ತಮಿಳು ಬಗ್ಗೆ ಇಷ್ಟೆಲ್ಲಾ ಮಾತಾಡ್ತಾರೆ, ಒಂದೇ ಒಂದು ಸಹಿ ತಮಿಳಲ್ಲಿ ಇರಲ್ಲ! ಸ್ಟಾಲಿನ್‌ಗೆ ಪ್ರಧಾನಿ ನರೇಂದ್ರ ಮೋದಿ ತರಾಟೆ

Picture of Savistara

Savistara

Bureau Report

ರಾಮೇಶ್ವರಂ : ತ್ರಿಭಾಷಾ ವಿವಾದದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಾಮೇಶ್ವರಂನಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ನಾಯಕರಿಂದ ಹಲವು ಪತ್ರಗಳು ನನಗೆ ಬರುತ್ತವೆ. ಆ ಪತ್ರದಲ್ಲಿ ಯಾರೂ ತಮಿಳಿನಲ್ಲಿ ಸಹಿ ಹಾಕುವುದಿಲ್ಲ. ಅವರು ನಿಜವಾಗಿಯೂ ತಮ್ಮ ಭಾಷೆಯ ಬಗ್ಗೆ ಹೆಮ್ಮೆ ಪಡುತ್ತಿದ್ದರೆ, ಕನಿಷ್ಠ ತಮ್ಮ ಹೆಸರನ್ನು ತಮಿಳಿನಲ್ಲಿ ಸಹಿ ಮಾಡಬೇಕು ಎಂದರು. ತಮಿಳು ಭಾಷೆ ಮತ್ತು ತಮಿಳು ಪರಂಪರೆ ಪ್ರಪಂಚದ ಮೂಲೆ ಮೂಲೆಯನ್ನು ತಲುಪುವಂತೆ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಬಡ ಕುಟುಂಬಗಳ ಮಕ್ಕಳು ಸಹ ವೈದ್ಯರಾಗುವ ಕನಸನ್ನು ನನಸಾಗಿಸಲು ತಮಿಳು ಭಾಷೆಯಲ್ಲಿ ವೈದ್ಯಕೀಯ ಕೋರ್ಸ್‌ಗಳನ್ನು ಪ್ರಾರಂಭಿಸಬೇಕು ಎಂದು ನಾನು ತಮಿಳುನಾಡು ಸರ್ಕಾರವನ್ನು ಒತ್ತಾಯಿಸುತ್ತೇನೆ.

ನಮ್ಮ ದೇಶದ ಯುವಕರು ವೈದ್ಯರಾಗಲು ವಿದೇಶಗಳಿಗೆ ಹೋಗಬೇಕಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಪ್ರಯತ್ನ. ಕಳೆದ 10 ವರ್ಷಗಳಲ್ಲಿ, ತಮಿಳುನಾಡಿಗೆ 11 ಹೊಸ ವೈದ್ಯಕೀಯ ಕಾಲೇಜುಗಳು ಬಂದಿವೆ ಎಂದು ಮೋದಿ ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!