2034ರ ವೇಳೆಗೆ ಒಂದು ರಾಷ್ಟ್ರ ಒಂದು ಚುನಾವಣೆ’ ನಿಜವಾಗಲಿದೆ: ಯೋಗಿ ಆದಿತ್ಯನಾಥ

Picture of Savistara

Savistara

Bureau Report

ಲಖನೌ: 2034ರ ವೇಳೆಗೆ ‘ಒಂದು ರಾಷ್ಟ್ರ ಒಂದು ಚುನಾವಣೆ’ ನಿಜವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಲಖನೌನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಭಿಯಾನ ನಡೆಯಬೇಕು. ಈ ಕುರಿತ ಟೀಕೆಗಳಿಗೆ, ಇದು ನಮ್ಮ ದೇಶ, ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ರಾಜಕೀಯ ಸ್ಥಿರತೆ ನಮ್ಮ ಪ್ರಯೋಜನಕ್ಕಾಗಿ ಎಂದು ಹೇಳಿ. ನೀವು ಈ ಉತ್ತರವನ್ನು ನೀಡಿ ಸಾಮೂಹಿಕ ಜಾಗೃತಿ ಅಭಿಯಾನವನ್ನು ಮುನ್ನಡೆಸಿದರೆ, 2034ರ ಹೊತ್ತಿಗೆ ಏಕಕಾಲದಲ್ಲಿ ಚುನಾವಣೆ ನಡೆಯುವುದು ನಿಜವಾಗಲಿವೆ’ ಎಂದು ಆದಿತ್ಯನಾಥ ತಿಳಿಸಿದ್ದಾರೆ.ಸಾಮಾಜಿಕ ಮಾಧ್ಯಮಗಳಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಭಿಯಾನ ನಡೆಸುವಂತೆ ಆದಿತ್ಯನಾಥ್ ಕರೆ ನೀಡಿದ್ದಾರೆ.1952 ಮತ್ತು 1967ರ ನಡುವೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಆದರೆ, ಕಾಂಗ್ರೆಸ್‌ನಲ್ಲಿನ ಆಂತರಿಕ ಬಿರುಕುಗಳಿಂದಾಗಿ ಆ ಪದ್ಧತಿ ಕೊನೆಗೊಂಡಿತು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಕನಸನ್ನು ನನಸಾಗಿಸಲು ಶ್ರಮಿಸುತ್ತಿದ್ದಾರೆ. ‘ರಾಷ್ಟ್ರ ಮೊದಲು’ ಎಂಬ ಮಂತ್ರದಿಂದ ಮಾರ್ಗದರ್ಶಿಸಲ್ಪಟ್ಟ ಎಲ್ಲರೂ ಏಕಕಾಲದಲ್ಲಿ ಚುನಾವಣೆಗಳನ್ನು ಬೆಂಬಲಿಸುತ್ತಾರೆ ಎಂದು ಆದಿತ್ಯನಾಥ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!