ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಣೆ |ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರಿಂದ ಎ. 12ರಂದು ಉದ್ಘಾಟನೆ

Picture of Savistara

Savistara

Bureau Report

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ರಂದು ನೆರವೇರಿಸಲಿದ್ದಾರೆ..

ಇದನ್ನು ಸಾಕಾರಗೊಳಿಸಲು ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣಕ್ಕೆ ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿರುವುದನ್ನು ನೋಡಿ ಸಂತೋಷವಾಗುತ್ತಿದೆ..ಈ ವಾರಾಂತ್ಯದಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4 ಗಂಟೆಗೆ ನಡೆಯುವ ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ನಮ್ಮ ಎಲ್ಲಾ ರೈಲ್ವೆ ಯಾತ್ರಿ ಸಂಘದ ಸದಸ್ಯರು, ರೈಲ್ವೆ ಹೋರಾಟಗಾರರು, ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಹೇಳಿದರು.

[t4b-ticker]
error: Content is protected !!