ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಸಂಸದ ಬ್ರಿಜೇಶ್ ಚೌಟ ಭೇಟಿ

Picture of Savistara

Savistara

Bureau Report

ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಇಂದು ಬೆಂಗಳೂರಿನಲ್ಲಿ ಸಂಸದ ಬ್ರಿಜೇಶ್ ಚೌಟ ಭೇಟಿಯಾದರು. ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಶಿರಾಡಿ ಘಾಟ್‌ನ ಮೂಲಕ ರಸ್ತೆ ಮತ್ತು ರೈಲು ಅಭಿವೃದ್ಧಿಗಾಗಿ ಸಮಗ್ರ ಹಾಗೂ ಸಂಯೋಜಿತ ಡಿಪಿಆರ್‌ನ ಅಗತ್ಯತೆಯ ಬಗ್ಗೆ ಈ ಸಂದರ್ಭ ಚರ್ಚಿಸಲಾಯಿತು.

ಈ ವೇಳೆ ಅವರು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಮತ್ತು ಸುಸ್ಥಿರ ಮೂಲಸೌಕರ್ಯ ಯೋಜನೆಗಾಗಿ ಕೇಂದ್ರದ ಏಜೆನ್ಸಿಗಳಿಗೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವ ಭರವಸೆ ನೀಡಿದರು. ಇದರೊಂದಿಗೆ ದಕ್ಷಿಣ ಕನ್ನಡ ಭಾಗದ ಬಾಕಿ ಉಳಿದಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳ ಬಗ್ಗೆಯೂ ಚರ್ಚಿಸಲಾಯಿತು.

[t4b-ticker]
error: Content is protected !!