ಉಡುಪಿ, ಏ.21(ಉಡುಪಿ ಟೈಮ್ಸ್ ವರದಿ): ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಮಾಜಿ ಜಿ.ಪಂ ಸದಸ್ಯಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಇವರಿಬ್ಬರು ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.)ದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇವರುಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆದೇಶಿಸಿದ್ದಾರೆ.
ಕೆಎಂಎಫ್ ಚುನಾವಣೆ ಬಿಜೆಪಿ ಗೆ ಬಂಡಾಯ ಬಿಸಿ | ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪಕ್ಷದಿಂದ ಆರು ವರ್ಷ ಉಚ್ಚಾಟನೆ
Savistara
Bureau Report
[t4b-ticker]













































