ಪ್ರಧಾನಿ ಮೋದಿ ಭದ್ರತಾ ಸಮಿತಿ ಸಭೆ; ‘ಸಂಘಟಿತ ಪ್ರತಿಕ್ರಿಯೆ’ಗೆ ಸಿದ್ಧವಾಗುತ್ತಿದೆ ಯೋಜನೆ!

Picture of Savistara

Savistara

Bureau Report

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ಈ ಸಭೆಯಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಪಹಲ್ಗಾಮ್‌ ಉಗ್ರ ದಾಳಿಗೆ ಪ್ರತಿಯಾಗಿ ಸಂಘಟಿತ ಪ್ರತಿಕ್ರಿಯೆ ನೀಡಲು ಯೋಜನೆ ಸಿದ್ಧಪಡಿಸುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ದಾಳಿಯ ಕುರಿತು ವಿಸ್ತೃತ ಮಾಹಿತಿ ನೀಡಲಾಯಿತು. ಅಲ್ಲದೇ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರಿಂದ ಸೂಚನೆಗಳನ್ನು ಸ್ವೀಕರಿಸಲಾಯಿತು ಎಂದು ಮೂಲಗಳು ಖಚಿತಪಡಿಸಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಈ ಉನ್ನತ ಮಟ್ಟದ ಭದ್ರತಾ ಸಮಿತಿ ಸಭೆಯಲ್ಲಿ, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಭದ್ರತಾ ಸಲಹೆಗಾರರು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮೂಲಗಳು ಖಚಿತಪಡಿಸಿವೆ.

ಮೂಲಗಳ ಪ್ರಕಾರ, ಪ್ರಧಾನಿ ,ಮೋದಿ ಅವರು ಈ ಸಭೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಜತಾಂತ್ರಿಕ ಸಂಪರ್ಕದ ಬಗ್ಗೆ ಕೂಡ ವಿಸ್ತೃತ ಚರ್ಚೆ ನಡೆದಿದ್ದು, ಭಯೋತ್ಪಾದನಾ ನಿಗ್ರಹ ಕ್ರಮಗಳ ಬಗ್ಗೆ ಭದ್ರತಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪಹಲ್ಗಾಮ್‌ ದಾಳಿಗೆ ಪ್ರತಿಯಾಗಿ ಬಲವಾದ, “ಸಂಘಟಿತ ಪ್ರತಿಕ್ರಿಯೆ” ನೀಡುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಶೀಘ್ರದಲ್ಲೇ ಪ್ರತೀಕಾರದ ಯೋಜನೆ ಸಿದ್ಧಪಡಿಸಲಾಗುವುದು ಎಂದು ಮೂಲಗಳು ಖಚಿತಪಡಿಸಿವೆ.

ಪಹಲ್ಗಾಮ್‌ ದಾಳಿಗೆ ಪ್ರತಿಯಾಗಿ ಭಾರತ ಬಲವಾದ ಪ್ರತಿಕ್ರಿಯೆ ನೀಡುವುದು ಖಚಿತವಾಗಿದ್ದು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಭೆಯು ಇದರ ಯೋಜನೆ ಸಿದ್ಧಪಡಿಸುವ ಮುನ್ಸೂಚನೆ ನೀಡಿದೆ.ಪಹಲ್ಗಾಮ್‌ ಉಗ್ರರ ದಾಳಿಯಿಂದಾಗಿ ಭಾರತದಲ್ಲಿ ತೀವ್ರ ಆಕ್ರೋಶ ಮಡುಗಟ್ಟಿದ್ದು, ಅಮಾಯಕ ಪ್ರವಾಸಿಗರ ಜೀವ ತೆಗೆದ ಉಗ್ರರನ್ನು ಸದೆಬಡಿಯುವಂತೆ ಎಲ್ಲೆಡೆ ಒತ್ತಾಯ ಕೇಳಿಬರುತ್ತಿದೆ.

[t4b-ticker]
error: Content is protected !!