ಮೈಸೂರು: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಗೆ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಖಂಡನೆ ವ್ಯಕ್ತಪಡಿಸಿದ್ದಾರೆ. ಉಗ್ರರ ದಾಳಿಗೆ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರ ಇದೆ. ಇದನ್ನು ಹತ್ತಿಕ್ಕುವ ಕೆಲಸ ಮಾಡಬೇಕು ಎಂದು ಹೇಳಿದರು. ಮೈಸೂರಲ್ಲಿ ಮಾತನಾಡಿದ ಅವರು, ಹಿಂದುಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಿದ ವಿಚಾರ. ಅವರ ಮನಸ್ಥಿತಿ ಯಾವ ರೀತಿ ಇರುತ್ತೋ ಗೊತ್ತಿಲ್ಲ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ತನಿಖೆಯ ನಂತರವಷ್ಟೇ ದಾಳಿಗೆ ನಿಖರ ಕಾರಣ ತಿಳಿಯಲಿದೆ. ಸಚಿವ ಮಹದೇವಪ್ಪ ಟ್ವೀಟ್ ಮಾಡಿದ್ದು, ಇದು ಅವರ ವೈಯುಕ್ತಿಕ ಅಭಿಪ್ರಾಯ. ಇದಕ್ಕೆ ಯಾರು ಹೊಣೆ ಎಂಬುದನ್ನು ಮಾಧ್ಯಮದವರು ಹೇಳಬೇಕು. ಅದಕ್ಕಿಂತ ಮುಖ್ಯವಾಗಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು, ಅದು ಬಹಳ ಮುಖ್ಯ ಎಂದು ಹೇಳಿದರು. ಕಾಶ್ಮೀರ ಕಳೆದ 70 ವರ್ಷಗಳಿಂದಲೂ ಸಮಸ್ಯೆ ಇರುವ ರಾಜ್ಯವಾಗಿದೆ. ಉಗ್ರರ ದಾಳಿಯ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೇಳಿದರು.
ಪೆಹಲ್ಗಾಮ್ ಉಗ್ರರ ದಾಳಿ : ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ!
Savistara
Bureau Report
[t4b-ticker]













































