ಕಾಶ್ಮೀರಕ್ಕೆ ಬಂದ ಅತಿಥಿಗಳಿಗೆ ನನಗೆ ರಕ್ಷಣೆ ಕೊಡಲು ಸಾಧ್ಯವಾಗಲಿಲ್ಲ. ನಾನು ಮಡಿದ 26 ಕುಟುಂಬದವರಲ್ಲಿ ಯಾವ ಮುಖದಲ್ಲಿ ಕ್ಷಮ ಕೇಳಲಿ? ಈ ಪರಿಸ್ಥಿತಿಯಲ್ಲಿ ನಾನು ಕೇಂದ್ರ ಸರ್ಕಾರದ ಬಳಿ ರಾಜ್ಯ ಸ್ಥಾನಮಾನ ಕೇಳುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಶ್ರೀನಗರ(ಏ.28) ಜಮ್ಮು ಮತ್ತು ಕಾಶ್ಮೀರಕ್ಕೆ ಬಂದ ಅತಿಥಿಗಳಿಗೆ ರಕ್ಷಣೆ ಕೊಡುವಲ್ಲಿ ನಾನು ವಿಫಲನಾಗಿದ್ದೇನೆ. ಜಮ್ಮು ಮತ್ತು ಕಾಶ್ಮೀರ ಪ್ರವಾಸೋದ್ಯಮ ಸಚಿವಾಲಯ ಜವಾಬ್ದಾರಿ ಹೊತ್ತಿರುವ ನಾನು ಹೇಗೆ ಮಡಿದ 26 ಕುಟುಂಬದ ಬಳಿ ಕ್ಷಮೆ ಕೇಳಲಿ? ನನ್ನಲ್ಲಿ ಕ್ಷಮೆ ಕೇಳಲು ಪದಗಳು ಉಳಿದಿಲ್ಲ. ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿಧಾನಸಭೆಯಲ್ಲಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಹಲವು ದಾಳಿಗಳನ್ನು ನೋಡಿದೆ. ಆದರೆ ಕಳೆದ 21 ವರ್ಷದಲ್ಲಿ ನಡೆದ ಅತೀ ದೊಡ್ಡ ದಾಳಿ ಇದಾಗಿದೆ. ಈ ಪರಿಸ್ಥಿತಿ ಮುಂದಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೇಳಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.
ಯಾವ ಪದಗಳಲ್ಲಿ ಕ್ಷಮೆ ಕೇಳಲಿ?ಪೂರ್ವದಿಂದ ಪಶ್ಚಿಮ, ಉತ್ತರ ದಿಂದ ದಕ್ಷಿಣದವರಗೆ ಭಾರತದ ಮೂಲೆ ಮೂಲೆಯಲ್ಲಿ ಈ ದಾಳಿಗೆ ಖಂಡನೆ ವ್ಯಕ್ತವಾಗುತ್ತಿದೆ, ನೋವು, ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇಡೀ ದೇಶವೇ ಈ ದಾಳಿಗೆ ಶೋಕಾಚರಣೆ ನಡೆಸಿದೆ. ತೀವ್ರ ನೋವಾಗಿದೆ. ಬೈಸರನ್ ಕಣಿವೆಯಲ್ಲಿ ನಡೆದ ಈ ದಾಳಿ ಕಳೆದ 21 ವರ್ಷದಲ್ಲಿ ನಡೆದ ಅತೀ ದೊಡ್ಡ ದಾಳಿಯಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸುವ ಪ್ರವಾಸಿಗರನ್ನು ಅತ್ಯಂತ ಸುರಕ್ಷತೆಯಲ್ಲಿ ವಾಪಾಸ್ ಕಳುಹಿಸುವ ಜವಾಬ್ದಾರಿ ನನ್ನದು. ಆದರೆ ನಾನು ವಿಫಲನಾದೆ. 26 ಕುಟುಂಬದ ಬಳಿ ಹೇಗೆ ಕ್ಷಮೆ ಕೇಳಲಿ ಎಂದು ಓಮರ್ ಅಬ್ದುಲ್ಲಾ ವಿಧಾನ ಸಭೆಯಲ್ಲಿ ಹೇಳಿದ್ದಾರೆ.
ಯಾವ ಮುಖದಲ್ಲಿ ರಾಜ್ಯ ಸ್ಥಾನ ಮಾನ ಪಡೆಯಲಿ?ಪೆಹಲ್ಗಾಂನಲ್ಲಿ ನಡೆದ ಈ ದಾಳಿಗೆ ದೇಶ ಮರುಗಿದೆ. ಈ ಸಂದರ್ಭದಲ್ಲಿ ನೋಡಿ, ಪೆಹಲ್ಗಾಂನಲ್ಲಿ 26 ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಸ್ಥಾನಮಾನ ನೀಡಿ ಎಂದು ಕೇಳಬೇಕಾ? ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾಮಾನಮಾನಕ್ಕೆ ಈ ಹಿಂದೆ ಹೋರಾಟ ಮಾಡಿದ್ದೇವೆ, ಮುಂದೆ ಮಾಡುತ್ತೇವೆ. ಆದರೆ ಈ ಸಂದರ್ಭದಲ್ಲಿ ರಾಜ್ಯ ಸ್ಥಾನಮಾನ ಕೇಳುವುದಿಲ್ಲ. ಯಾವ ಮುಖ ಇಟ್ಟುಕೊಟ್ಟು ರಾಜ್ಯ ಸ್ಥಾನಮಾನ ಕೇಳಲಿ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.













































