ಪಾಕಿಸ್ತಾನವನ್ನು ಬೆಂಬಲಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್ ತರಾಟೆ, ಭಾರತ ಬಿಟ್ಟು ಹೊರಡಿ ಎಂದು ಆಕ್ರೋಶ!

Picture of Savistara

Savistara

Bureau Report

ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಮಂಗಳವಾರ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ‘ಭಾರತದಲ್ಲಿರುವ ಕೆಲವು ಮಂದಿ ಪಾಕಿಸ್ತಾನದ ಬಗ್ಗೆ ಒಲವು ಹೊಂದಿದ್ದಾರೆ. ಪಾಕಿಸ್ತಾನದ ಮೇಲೆ ಪ್ರೀತಿ ಇದ್ದವರು ಅಲ್ಲಿಗೇ ಹೊರಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರು ಉಗ್ರರ ದಾಳಿಯ ಬಗ್ಗೆ ಮಂಗಳವಾರ ಹೈದರಾಬಾದ್‌ನಲ್ಲಿ ಪವನ್‌ ಕಲ್ಯಾಣ್‌ ಮಾತನಾಡಿದರು. ಜನಸೇನಾ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್‌ ನಾಯಕರು ಟಿವಿ ಡಿಬೆಟ್‌ಗಳಲ್ಲಿ ಪಾಕಿಸ್ತಾನದ ಬಗ್ಗೆ ಮೃದು ಧೋರಣೆ ವ್ಯಕ್ತಪಡಿಸಿದ್ದಾರೆ. ಭಾರತದ ಮೇಲೆ ದಾಳಿಯಾದಾಗ ಪಾಕಿಸ್ತಾನವನ್ನು ಯಾಕೆ ಬೆಂಬಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಬೆಂಬಲ ಕೊಡುವ ಮೂಲಕ ಏನು ಗಳಿಸುತ್ತಾರೆ? ಕಾಂಗ್ರೆಸ್‌ ನಾಯಕರಿಗೆ ಪಕ್ಕದ ದೇಶದ ಬಗ್ಗೆ ಅಷ್ಟೊಂದು ಪ್ರೀತಿಯಿದ್ದರೇ ಅಲ್ಲಿಗೇ ಹೋಗಲಿ. ಜಾತ್ಯತೀತತೆಯ ಹೆಸರಿನಲ್ಲಿ ಪಾಕಿಸ್ತಾನಕ್ಕೆ ಬೆಂಬಲಿಸೋದು ಸರಿಯಲ್ಲ. ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಪವನ್‌ ಕಲ್ಯಾಣ್‌ ಆಗ್ರಹಿಸಿದರು.

[t4b-ticker]
error: Content is protected !!