ಹಿಂದೂ ಕಾರ್ಯಕರ್ತನ ಕೊಲೆ: ಸುಹಾಸ್ ಅಂತಿಮ ಯಾತ್ರೆ, ಬಂದ್ ನಡುವೆಯೂ ಹಲವೆಡೆ ಚೂರಿ ಇರಿತ, ಅಹಿತಕರ ಘಟನೆ

Picture of Savistara

Savistara

Bureau Report

ಮಂಗಳೂರಿನಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ ಕಾರಿಂಜದಲ್ಲಿ ನಡೆಯಲಿದೆ. ಅಂತಿಮ ಯಾತ್ರೆಯು ಬಿ.ಸಿ. ರೋಡ್ ಮಾರ್ಗವಾಗಿ ಕಾರಿಂಜದವರೆಗೆ ನಡೆಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತು, ಅಲ್ಲಲ್ಲಿ ಚೂರಿ ಇರಿತ ಮತ್ತು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಗುರುವಾರ ರಾತ್ರಿ ಕೊಲೆಯಾದ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ ಮಂಗಳೂರು ಖಾಸಗಿ ಆಸ್ಪತ್ರೆಯಿಂದ ಬಿಸಿ ರೋಡ್ ಮಾರ್ಗವಾಗಿ ಕಾರಿಂಜದ ಅವರ ಮನೆಗೆ ಅಂತಿಮ ಯಾತ್ರೆ ನಡೆಯಿತು.

ಕಾರಿಂಜದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಸಾವಿರಾರು ಕಾರ್ಯಕರ್ತರು, ನೂರಾರು ವಾಹನದ ಜತೆ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಈ ಭಾಗದ ಶಾಸಕರು, ಮಾಜಿ ಸಂಸದರು ಭಾಗಿಯಾದರು.ಬಂದ್ ನಡುವೆಯೂ ಅಹಿತಕರ ಘಟನೆಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಶ್ವ ಹಿಂದೂ ಪರಿಷತ್ ಬಂದ್ ಗೆ ಕರೆ ನೀಡಿತ್ತು. ಬಸ್ ಗಳ ಓಡಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಇಷ್ಟರ ನಡುವೆಯೂ ಮತ್ತೆ ಅಡ್ಯಾರ್, ಉಳ್ಳಾಲ, ಉಡುಪಿಯಲ್ಲಿ ಚೂರಿ ಇರಿತ ಪ್ರಕರಣಗಳು ನಡೆದಿವೆ.

ಇನ್ನು ಲೇಡಿಹಿಲ್, ಹಂಪನಕಟ್ಟ, ಕಂಕನಾಡಿಯಲ್ಲಿ ಸಂಚರಿಸಿದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಬಿ.ಸಿ. ರೋಡ್ ನಲ್ಲಿ ರಿಕ್ಷಾದ ಮೇಲೆ ದಾಳಿಯಾಗಿದೆ. ಬಸ್ ಗಳ ಓಡಾಟ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ವಾಹನಗಳ ಓಡಾಟ ಕೂಡಾ ವಿರಳ ಆಗಿದೆ.

ಮಣಿಪಾಲ, ಉಡುಪಿಯಿಂದ ಮಂಗಳೂರಿಗೆ ಎಕ್ಸ್ ಪ್ರೆಸ್, ಸರ್ವಿಸ್ ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರ ವ್ಯತ್ಯಯವಾಗಿದ್ದು ಬೆರಳೆಣಿಕೆ ಬಸ್ಸುಗಳು ಪಡುಬಿದ್ರಿ ತನಕ ತೆರಳಿವೆ. ಸರಕಾರಿ, ಖಾಸಗಿ ಕಚೇರಿಗೆ ತೆರಳುವವರು, ಯಾತ್ರಾರ್ಥಿಗಳು ಸಂಕಷ್ಟಕ್ಕೆ ಈಡಾಗಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ; ಪೊಲೀಸರು ಅವನ ಕಾರಲ್ಲಿ ಆಯುಧ ಇರದಂತೆ ನೋಡಿಕೊಂಡಿದ್ದಾರೆ : ಹರೀಶ್‌ ಪೂಂಜಾ!ರಿಕ್ಷಾ ಚಾಲಕನಿಗೆ ಹಲ್ಲೆ, ಇಬ್ಬರ ಬಂಧನಬಾಡಿಗೆಗೆ ತೆರಳುತ್ತಿದ್ದ ರಿಕ್ಷಾ ಚಾಲಕನಿಗೆ ಗುರುವಾರ ರಾತ್ರಿ ಬೈಕಿನಲ್ಲಿ ಬಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಡಗಬೆಟ್ಟಿನ ಅಬೂಬಕ್ಕರ್ ಎಂಬ ವ್ಯಕ್ತಿ ಮೇಲೆ ಹಲ್ಲೆಯಾಗಿದೆ. ಸಂದೇಶ ಬೊಮ್ಮರಬೆಟ್ಟು ಹಾಗೂ ಸುಶಾಂತ್ ಹಿರಿಯಡ್ಕ ಬಂಧಿತ ಆರೋಪಿಗಳು. ಇಬ್ಬರನ್ನೂ ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ತನಿಖೆ ಮುಂದುವರಿದಿದೆ ಎಂದು ಎಸ್ಪಿ ಡಾ. ಅರುಣ ಕೆ. ತಿಳಿಸಿದ್ದಾರೆ.

ಆತ್ರಾಡಿಗೆ ಬರುವಂತೆ ದಿನೇಶ್ ದೂರ ವಾಣಿ ಕರೆ ಮಾಡಿದ ಹಿನ್ನೆಲೆಯಲ್ಲಿ ಬಾಡಿಗೆಗೆ ಆತ್ರಾಡಿಯಿಂದ ಮದಗಕ್ಕೆ ತೆರಳುತ್ತಿದ್ದ ವೇಳೆ ಹಲ್ಲೆ ಘಟನೆ ನಡೆದಿದೆ. ಆತ್ರಾಡಿ ಗ್ಯಾಸ್‌ ಪೆಟ್ರೋಲ್‌ ಬಂಕ್‌ ಬಳಿ ಬಂದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಗಾಡಿಯನ್ನು ನಿಲ್ಲಿಸು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಆಟೋರಿಕ್ಷಾವನ್ನು ಅಡ್ಡಗಟ್ಟಿ ನಿಲ್ಲಿಸಲು ಯತ್ನಿಸಿದರು. ಗಾಡಿಯನ್ನು ನಿಲ್ಲಿಸದೇ ಮುಂದೆ ಬಂದಾಗ, ಬೈಕಿನಲ್ಲಿದ್ದ ಹಿಂಬದಿ ಸವಾರ ಜೀವ ಬೆದರಿಕೆ ಒಡ್ಡಿದ್ದು ಶೇಡಿಗುಡ್ಡೆ ಬಳಿ ರೋಸ್‌ ಬಸ್ಸಿನವರ ಮನೆ ಬಳಿ ಇರುವ ರಸ್ತೆಯಲ್ಲಿ ಆಟೋ ರಿಕ್ಷಾವನ್ನು ನಿಲ್ಲಿಸಿ ಓಡಲು ಪ್ರತ್ನಿಸಿದಾಗ ಬೈಕ್‌ ನಲ್ಲಿದ್ದ ವ್ಯಕ್ತಿ ತಲವಾರನ್ನು ಬೀಸಿದ್ದು ಹೊಡೆತದಿಂದ ತಪ್ಪಿಸಿಕೊಂಡರು.ಬೈಕಿನಲ್ಲಿದ್ದ ಇನ್ನೊಬ್ಬ ವ್ಯಕ್ತಿಯು ಯಾವುದೋ ಬಾಟಲಿಯನ್ನು ಕೈ ಯಲ್ಲಿ ಹಿಡಿದು ಆಟೋ ರಿಕ್ಷಾ ಮುಂಭಾಗದ ಕನ್ನಡಿಗೆ ಹೊಡೆದಿದ್ದಾನೆ.

ರಿಕ್ಷಾ ಚಾಲಕ ಪಕ್ಕದಲ್ಲಿದ್ದ ಕಂಪೌಂಡ್ ಜಿಗಿದು ಓಡಿ ಹೋಗಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!