Modi: ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಮತ್ತು ಭಾರತದ ನಿಲುವು ದೃಢವಾಗಿದೆ. ಭಾರತದ ಮೇಲೆ ಪಾಕಿಸ್ತಾನ ಗುಂಡು ಹಾರಿಸಿದರೆ, ಇಲ್ಲಿಂದಲೂ ಶೆಲ್ ಹಾರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೂ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಆಪರೇಷನ್ ಸಿಂದೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಸರ್ಜಿಕಲ್ ಕ್ರಮವು ಅತ್ಯಂತ ಯಶಸ್ವಿಯಾಗಿದೆ. ಇನ್ನೂ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಬಗ್ಗೆ ಬಹಳ ಕಟ್ಟುನಿಟ್ಟಿನ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.
ಮೋದಿ ಹೇಳಿದ್ದೇನು?
ಈಗ ಭಯೋತ್ಪಾದನೆಯ ವಿರುದ್ಧ ಯಾವುದೇ ಮಾತುಕತೆ ಇರುವುದಿಲ್ಲ, ಕೇವಲ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನದಿಂದ ಗುಂಡು ಹಾರಿಸಿದರೆ, ಇಲ್ಲಿಂದಲೂ ಶೆಲ್ ಹಾರಿಸಲಾಗುತ್ತದೆ. ಭಯೋತ್ಪಾದಕರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವವರೆಗೆ ಆಪರೇಷನ್ ಸಿಂಧೂರ್ ಮುಂದುವರಿಯುತ್ತದೆ ಎಂದು ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ.
ಭಾರತದ ದಾಳಿಯಲ್ಲಿ ಪಾಕಿಸ್ತಾನಕ್ಕೆ ಭಾರಿ ನಷ್ಟವಾಗಿದೆ. ಸೇನಾ ಮೂಲಗಳ ಪ್ರಕಾರ, ಹಲವಾರು ಭಯೋತ್ಪಾದಕ ಉಡಾವಣಾ ನೆಲೆಗಳು ನಾಶವಾಗಿವೆ, ಹಲವಾರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಈ ದಾಳಿಯಿಂದಾಗಿ ಅನೇಕರು ಗಾಯಗೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನ ಮಂತ್ರಿಯವರ ಈ ಹೇಳಿಕೆ ಭಯೋತ್ಪಾದಕರಿಗೆ ಎಚ್ಚರಿಕೆಯಷ್ಟೇ ಅಲ್ಲ, ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಸ್ಪಷ್ಟ ನೀತಿಯ ಘೋಷಣೆಯೂ ಆಗಿದೆ. ಇನ್ನು ಮುಂದೆ ಭಯೋತ್ಪಾದನೆಯೊಂದಿಗೆ ಮಾತುಕತೆ ಇರುವುದಿಲ್ಲ, ಕೇವಲ ಉತ್ತರಗಳು ಮಾತ್ರ ಇರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.













































