ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಆ ಪ್ರಕಾರ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ಬಿ.ವೈ.ವಿಜಯೇಂದ್ರರು ಭಾಗವಹಿಸಲಿದ್ದಾರೆ.ಇದೀಗ ಕಾರ್ಯಕ್ರಮ ಯಶಸ್ಸಿಗೆ ಸಮಿತಿ, ಉಪಸಮಿತಿಗಳನ್ನು ರಚಿಸಲಾಗಿದ್ದು ಪ್ರತಿ ಗ್ರಾಮದಲ್ಲಿ ಆಮಂತ್ರಣ ಪತ್ರ ವಿತರಣೆ ನಡೆದಿದೆ,ಪಕ್ಷದ ಕಾರ್ಯಕರ್ತರು ಕೈಜೋಡಿಸಿದ್ದು ಕಾರ್ಯಕ್ರಮ ಯಶಸ್ಸು ದೃಷ್ಟಿಯಿಂದ ಬ್ಯಾನರ್, ಬಂಟಿಂಗ್ಸ್ ಅಳವಡಿಸಿದ್ದು ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ದೈವದ ಪ್ರಸಾದ ಸ್ವೀಕರಿಸುವರಿದ್ದಾರೆ ಸಂಸದ ಕ್ಯಾ ಬ್ರಿಜೇಶ್ ಚೌಟ ಅಲ್ಲದೆ ಬಿಜೆಪಿ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಮೇ 17 ರಂದು ಸುಳ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗಮನ | ಕಾರ್ಯಕ್ರಮ ಯಶಸ್ಸಿಗೆ ಕಾರ್ಯಕರ್ತರ ಭರದ ಸಿದ್ಧತೆ
Savistara
Bureau Report
[t4b-ticker]













































