ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು, ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ ನಡೆಯಲಿದೆ. ಕೇಂದ್ರ ಸರಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಸಂಸ್ಕರಣಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ರತ್ನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಲಿದ್ದಾರೆ.ಸಂಸದ ಕ್ಯಾ.ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕಿ ಕು.ಭಾಗೀರಥಿ ಮುರುಳ್ಯ ನಾಮಫಲಕ ಅನಾವರಣ ಮಾಡಲಿದ್ದಾರೆ. ಸಹಕಾರ ರತ್ನ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಚಂದ್ರ ಕೋಲ್ಟಾರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ ಉಪಸ್ಥಿತರಿರುವರು.
ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕ ಮತ್ತು ಜೇನು ಚಾಕಲೇಟ್ ಕಟ್ಟಡ ಮೇ.23ರಂದು ಲೋಕಾರ್ಪಣೆ
Savistara
Bureau Report
[t4b-ticker]












































