ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ಬಳಿ ಕ್ಯಾಂಪ್ಕೋ ಸಂಸ್ಥೆ ಸಾರ್ವಜನಿಕರ ಬಹುದಿನದ ಬೇಡಿಕೆಯಾದ ವೃತ್ತವನ್ನು ನಿರ್ಮಿಸಿ ಇಂದು ಲೋಕಾರ್ಪಣೆಗೊಳಿಸಿದೆ.

ಶಾಸಕ ಕಿರಣ್ ಕೋಡ್ಗಿ ಉದ್ಘಾಟಿಸಿದರು, ಶಾಸಕ ಗುರುರಾಜ್ ಗಂಟಿಹೊಳೆ ವೃತ್ತ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ,

ಮುಖ್ಯ ಅತಿಥಿಗಳಾಗಿ ಶ್ರೀಮತಿ ಲತಾ ಶೆಟ್ಟಿ, ಕ್ಯಾಂಪ್ಕೋ ಸಂಸ್ಥೆ ನಿರ್ದೇಶಕರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.













































