ಮೇಘಸ್ಫೋಟ, ಭೂಕಂಪ, ಐದು ವರ್ಷ ಗಂಡಾಂತರ; ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿ ಶ್ರೀ

Picture of Savistara

Savistara

Bureau Report

ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಕೋಡಿಮಠದ ಶ್ರೀಗಳು ಮತ್ತೆ ಸ್ಪೋಟಕ‌ ಭವಿಷ್ಯ ನುಡಿದಿದ್ದಾರೆ. ಬೆಳವಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದರು.ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ, ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!