ಮೇ 25ರಂದು ನಡೆದ ಬಜ್ಪೆ ಚಲೋ: ಅನುಮತಿ ರಹಿತ ಪ್ರತಿಭಟನೆ: ಆಯೋಜಕರು, ಭಾಷಣಕಾರರ ವಿರುದ್ಧ ಪ್ರಕರಣ ದಾಖಲು

Picture of Savistara

Savistara

Bureau Report

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಮೇ 25ರಂದು ಬಜ್ಜೆಯಲ್ಲಿ ನಡೆಸಿದ ‘ಬಜ್ಜೆ ಚಲೋ’ ಪ್ರತಿಭಟನೆಯು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಸಾರ್ವಜನಿಕ ಶಾಂತಿಭಂಗ ಹಾಗೂ ಕೋಮು ಪ್ರಚೋದನೆಯ ಆರೋಪದಡಿ ಸಂಘಟಕರು ಮತ್ತು ಭಾಷಣಕಾರರ ವಿರುದ್ಧ ಬಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, ಮೇ 26: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಸಂಘಟನೆಗಳು ಮೇ 25ರಂದು ಬಜ್ಜೆಯಲ್ಲಿ ನಡೆಸಿದ ‘ಬಜೆ ಚಲೋ’ ಪ್ರತಿಭಟನೆಯು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಸಾರ್ವಜನಿಕ ಶಾಂತಿಭಂಗ ಹಾಗೂ ಕೋಮು ಪ್ರಚೋದನೆಯ ಆರೋಪದಡಿ ಸಂಘಟಕರು ಮತ್ತು ಭಾಷಣಕಾರರ ವಿರುದ್ಧ ಬಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಪೂರ್ವಾನುಮತಿ ಪಡೆಯದೆ, ಶನಿವಾರ ಮಧ್ಯಾಹ್ನ 3:00 ರಿಂದ ಸಂಜೆ 5:00 ಗಂಟೆಯವರೆಗೆ ಬಟ್ಟೆ ಶಾರದಾ ಮಂಟಪದ ಬಳಿ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ ಸುಮಾರು 3,000 ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರು ಬಜ್ಜೆ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಜಮಾಯಿಸಿ, ಪ್ರಮುಖ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಹಾಗೂ ರಾಜ್ಯ ಹೆದ್ದಾರಿ ಸಂಖ್ಯೆ 67ರ ಕೆಲ ಭಾಗಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದು, ವಾಹನ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ್ದಲ್ಲದೆ, ಸಾರ್ವಜನಿಕರ ಓಡಾಟಕ್ಕೂ ಅಡ್ಡಿಯುಂಟುಮಾಡಿದ್ದರು ಎಂದು ಮಂಗಳೂರು ಪೊಲೀಸ್ ಕಮೀಷನ‌ರ್ ಅನುಪಮ ಅಗರ್ವಾಲ್ ತಿಳಿಸಿದ್ದಾರೆ .

ಘಟನೆಯ ಗಂಭೀರತೆಯನ್ನು ಹೆಚ್ಚಿಸುವಂತೆ, ಪ್ರತಿಭಟನೆಯ ವೇಳೆ ಓರ್ವ ಭಾಷಣಕಾರ, ಸುಹಾಸ್ ಶೆಟ್ಟಿ ಪ್ರಕರಣವನ್ನು ಮುಂದಿಟ್ಟುಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವಂತಹ ಅತ್ಯಂತ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಪೊಲೀಸ್ ಪ್ರಕಟಣೆಯಲ್ಲಿ ಗಂಭೀರವಾಗಿ ಆರೋಪಿಸಲಾಗಿದೆ. ಈ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದವು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಈ ಘಟನಾವಳಿಗಳ ಹಿನ್ನೆಲೆಯಲ್ಲಿ, ಬಜೆ ಪೊಲೀಸ್‌ ಠಾಣೆಯಲ್ಲಿ (ಅಪರಾಧ ಸಂಖ್ಯೆ: 90/2025) ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ಗಳಾದ 189(2) (ಸಾರ್ವಜನಿಕ ಸೇವಕನ ಆದೇಶ ಉಲ್ಲಂಘನೆ), 191(2) (ಕಾನೂನುಬಾಹಿರ ಸಭೆ), 285 (ಸಾರ್ವಜನಿಕ ಮಾರ್ಗಕ್ಕೆ ಅಡಚಣೆ), 192 (ಗಲಭೆಗೆ ಪ್ರಚೋದನೆ), 351(2) ಮತ್ತು 351(3) (ಬೆದರಿಕೆ ಮತ್ತು ಸಾರ್ವಜನಿಕ ಶಾಂತಿ ಕದಡುವ ಕೃತ್ಯ), 190 (ಸಾರ್ವಜನಿಕ ಕಿರುಕುಳ) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಸೆಕ್ಷನ್ 107 (ಶಾಂತಿ ಭಂಗ ತಡೆಯಲು ಮುನ್ನೆಚ್ಚರಿಕೆ) ಮತ್ತು 109 (ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವುದು) ಅಡಿಯಲ್ಲಿ ಪ್ರತಿಭಟನೆಯ ಆಯೋಜಕರು ಮತ್ತು ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

[t4b-ticker]
error: Content is protected !!