ಕೊಲ್ಲೂರಿನ ಸೌಪರ್ಣಿಕ ನದಿ ನೀರಿನ ಮಟ್ಟ ಏರಿಕೆ, ಸ್ನಾನಘಟ್ಟಕ್ಕೆ ಇಳಿಯದಂತೆ ಸೂಚನೆ

Picture of Savistara

Savistara

Bureau Report

ಕೊಲ್ಲೂರು: ಉಡುಪಿ, ದ.ಕ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕೊಲ್ಲೂರಿನ ಸುತ್ತಮುತ್ತ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.ದಾಖಲೆ ಪ್ರಮಾಣದ ಮಳೆಯಿಂದಾಗಿ ಈ ಭಾಗದ ಅನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನದಿಯಲ್ಲೂ ಕೂಡಾ ನೀರಿನ ಮಟ್ಟ ಹೆಚ್ಚಾಗಿದ್ದು ಸ್ನಾನಘಟ್ಟಕ್ಕೆ ಭಕ್ತರು ಇಳಿಯುವಂತಿಲ್ಲ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಿಳಿಸಿದ್ದಾರೆ.ಧಾರಾಕಾರ ಮಳೆಯ ನಡುವೆ ಕೂಡಾ ಭಕ್ತಾದಿಗಳು ದೇಗುಲಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

[t4b-ticker]
error: Content is protected !!