ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಗದ್ದಲ ಸೃಷ್ಟಿಸಿದ ಘಟನೆ ನಡೆಯಿತು. ಇದರಿಂದ ಕೋಪಗೊಂಡ ಸಚಿವರು ಆ ಮುಖಂಡನನ್ನು ಹೊರಗೆ ಕಳುಹಿಸುವಂತೆ ತನ್ನ ಸಿಬ್ಬಂದಿಗಳಿಗೆ ಸೂಚಿಸಿದ ಘಟನೆಯು ಇದೆ ವೇಳೆ ನಡೆಯಿತು.
ಮಂಗಳೂರು : ಮೇ 31: ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಗದ್ದಲ ಸೃಷ್ಟಿಸಿದ ಘಟನೆ ನಡೆಯಿತು.ಇದರಿಂದ ಕೋಪಗೊಂಡ ಸಚಿವರು ಆ ಮುಖಂಡನನ್ನು ಹೊರಗೆ ಕಳುಹಿಸುವಂತೆ ತನ್ನ ಸಿಬ್ಬಂದಿಗಳಿಗೆ ಸೂಚಿಸಿದ ಘಟನೆಯು ಇದೆ ವೇಳೆ ನಡೆಯಿತು.
ಸಚಿವ ಗುಂಡೂರಾವ್ ಅವರು ಸಮಾಜದಲ್ಲಿ ಶಾಂತಿ ಕದಡುವಂತಹ ಪ್ರಚೋದನಕಾರಿ ಭಾಷಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ವಿವರಿಸುತ್ತಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್ನ ಮುಸ್ಲಿಂ ಮುಖಂಡರೊಬ್ಬರು, “ಮೊನ್ನೆ ನಡೆದ ಕೊಲೆಯು ಪ್ರಚೋದನಕಾರಿ ಭಾಷಣದಿಂದಲೇ ಆಗಿದೆ” ಎಂದು ನೇರವಾಗಿ ಆರೋಪಿಸಿದರು.
ಈ ಅನಿರೀಕ್ಷಿತ ಆರೋಪದಿಂದ ಕೆರಳಿದ ಸಚಿವ ದಿನೇಶ್ ಗುಂಡೂರಾವ್ ಅವರು, ಆ ಮುಖಂಡನ ಮಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಏಯ್, ಯಾರು ಅವನು? ಮೊದಲು ಅವನನ್ನು ಹೊರಗೆ ಹಾಕ್ರಿ” ಎಂದು ಗಟ್ಟಿದನಿಯಲ್ಲಿ ಕೂಗಾಡಿದರು.
ತಕ್ಷಣವೇ ಅಲ್ಲಿದ್ದ ತಮ್ಮ ಸಿಬ್ಬಂದಿಗೆ ಆ ಮುಖಂಡನನ್ನು ಸಭಾಂಗಣದಿಂದ ಹೊರಕ್ಕೆ ಕಳುಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಘಟನೆಯಿಂದ ಸುದ್ದಿಗೋಷ್ಠಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಯು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.













































