ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ.
ಪುತ್ತೂರು: ಇಲ್ಲಿನ ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾರ್ ಪುತ್ತಿಲ ಅವರು ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಸ್ವತಃ ಅರುಣ್ ಕುಮಾರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ.
ಒಂದುವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೇ ಈ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.













































