RCB ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಪುತ್ತೂರು ಮೂಲದ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿ ದುರ್ಮರಣ

Picture of Savistara

Savistara

Bureau Report

ಇತ್ತೀಚೆಗೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುತ್ತೂರು ಮೂಲದ ಯುವತಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮೃತ ಯುವತಿಯನ್ನು ಚಿನ್ಮಯಿ ಶೆಟ್ಟಿ (19) ಎಂದು ಗುರುತಿಸಲಾಗಿದೆ.

ಮಂಗಳೂರು: ಇತ್ತೀಚೆಗೆ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುತ್ತೂರು ಮೂಲದ ಯುವತಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ಚಿನ್ಮಯಿ ಶೆಟ್ಟಿ (19) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಚಿನ್ಮಯಿ ಶೆಟ್ಟಿ. ಕಾಲೇಜಿನಿಂದ ತನ್ನ ಸ್ನೇಹಿತರೊಡನೆ ಆರ್‌ಸಿಬಿ ತಂಡದ ಗೆಲುವನ್ನು ಸಂಭ್ರಮಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ, ಅನಿರೀಕ್ಷಿತವಾಗಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಸಿಲುಕಿದ ಚಿನ್ಮಯಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಅವರ ಪೋಷಕರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿವೆ.

ಮೃತ ಯುವತಿಯ ಹಿನ್ನೆಲೆ:

ಚಿನ್ಮಯಿ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ನಿವಾಸಿ. ಇವರು ಕರುಣಾಕರ ಶೆಟ್ಟಿ ಮತ್ತು ಪೂಜಾ ದಂಪತಿಯ ಪುತ್ರಿ. ಚಿನ್ಮಯಿಗೆ ಓರ್ವ ಸಹೋದರನಿದ್ದು, ಅವರು ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.

ತಂದೆ ಕರುಣಾಕರ ಶೆಟ್ಟಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕುಟುಂಬವು ಪ್ರಸ್ತುತ ಬೆಂಗಳೂರಿನ ನಾರಾಯಣನಗರದಲ್ಲಿ ನೆಲೆಸಿತ್ತು.

ಪ್ರತಿಭಾವಂತ ವಿದ್ಯಾರ್ಥಿನಿ:

ಚಿನ್ಮಯಿ ಓದಿನಲ್ಲೂ ಮುಂದಿದ್ದ ಪ್ರತಿಭಾವಂತೆಯಾಗಿದ್ದು, ಬೆಂಗಳೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದರು.ಕೇವಲ ಓದಷ್ಟೇ ಅಲ್ಲದೆ, ಕ್ರೀಡೆಗಳಲ್ಲೂ ಸಕ್ರಿಯರಾಗಿದ್ದ ಅವರು ಉತ್ತಮ ಕ್ರೀಡಾಪಟುವಾಗಿದ್ದರು. ಇದರೊಂದಿಗೆ, ಕಲೆ ಸಂಸ್ಕೃತಿಯಲ್ಲೂ ಆಸಕ್ತಿ ಹೊಂದಿದ್ದ ಚಿನ್ಮಯಿ, ‘ಯಕ್ಷ ತರಂಗ’ ಯಕ್ಷಗಾನ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯಾಗಿಯೂ ಯಕ್ಷಗಾನ ಕಲಿಯುತ್ತಿದ್ದರು.

[t4b-ticker]
error: Content is protected !!