
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅಭಿಮಾನಿಗಳ ಕಾಲ್ತುಳಿತ ಸಾವು ಪ್ರಕರಣದಲ್ಲಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿವಾದ ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಕೇಂದ್ರದ ನಿರ್ಧಾರ ಅಧಿಕಾರಿಗಳ ಭವಿಷ್ಯ ನಿರ್ಧರಿಸಲಿದೆ. ಕ್ರೀಡಾಂಗಣದ ಪ್ರವೇಶ ದ್ವಾರದ ಬಳಿ ಕಾಲ್ತುಳಿತದಲ್ಲಿ ಆರ್ಸಿಬಿ ಅಭಿಮಾನಿಗಳ ಸಾವು ದುರಂತಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿವಾದದ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ.

ಒಂದೆಡೆ ಕೇಂದ್ರದ ನಡೆ ಮೇಲೆ ಅಮಾನತು ಶಿಕ್ಷೆಗೊಳಗಾಗದ ಅಧಿಕಾರಿಗಳ ಭವಿಷ್ಯ ನಿಂತಿದ್ದರೆ, ಇನ್ನೊಂದೆಡೆ ಈ ವಿಚಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ರಾಜಕೀಯ ಕುಸ್ತಿಗೆ ಅಖಾಡವಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.













































