
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡರ ಮತ್ತು ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಪೊಲೀಸ್ ಭೇಟಿ,ಸುಹಾಸ್ ಶೆಟ್ಟಿ ಹತ್ಯೆಯ ಘಟನಾವಳಿಗಳ ಬಗ್ಗೆ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರುಗಳ ನೇತೃತ್ವದ ಪ್ರಮುಖರಿಂದ ಕಾಂಗ್ರೆಸ್ ಸರಕಾರದ ಹಾಗೂ ಪೊಲೀಸ್ ಇಲಾಖೆಯ ದೌರ್ಜನ್ಯದ ಮಾಹಿತಿ ಸಂಗ್ರಹ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ,ವಿಪಕ್ಷ ನಾಯಕ ಆರ್ ಅಶೋಕ್,ಚಲವಾದಿ ನಾರಾಯಣ ಸ್ವಾಮಿ,ರವಿಕುಮಾರ್,ಅರವಿಂದ್ ಬೆಲ್ಲದ್, ಸಂಸದ ಕ್ಯಾ ಬ್ರಿಜೇಶ್ ಚೌಟ, ಭಾಸ್ಕರ್ ರಾವ್ ಜಿಲ್ಲೆಯ ಬಿಜೆಪಿ ಶಾಸಕರು, ಕಾರ್ಯಕರ್ತರು ಉಪಸ್ಥಿತರಿದ್ದರು.













































