
ಅಹಮದಾಬಾದ್: ಪತನಗೊಂಡ ಏರ್ ಇಂಡಿಯಾ (Air India) ವಿಮಾನವು ಸುಮಾರು 1.25 ಲಕ್ಷ ಲೀಟರ್ ಇಂಧನವನ್ನು ಹೊತ್ತೊಕೊಂಡು ಸಾಗುತ್ತಿತ್ತು. ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದಾಗಿ (Temperature) ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆಯಿಂದ ಇಡೀ ರಾಷ್ಟ್ರವು ದುಃಖದಲ್ಲಿದ್ದು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಅಪಘಾತದ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು ಎಂದು ತಿಳಿಸಿದರು.
ನಾನು ಗುಜರಾತ್ ಮುಖ್ಯಮಂತ್ರಿ ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬರು ದುರಂತದಿಂದ ಪಾರಾಗಿದ್ದು, ಡಿಎನ್ಎ ಪರಿಶೀಲನೆಯ ನಂತರ ಸಾವಿನ ಘೋಷಿಸಲಾಗುವುದು ಎಂದು ಹೇಳಿದರು. ನಾನು ಬದುಕುಳಿದ ಓರ್ವ ಪ್ರಯಾಣಿಕನನ್ನು ಭೇಟಿಯಾದೆ. ಪ್ರತಿಯೊಂದು ಇಲಾಖೆಯು ಸಮನ್ವಯದಿಂದ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಮೃತ ದೇಹಗಳ ಮರುಪಡೆಯುವಿಕೆ ಬಹುತೇಕ ಪೂರ್ಣಗೊಂಡಿದೆ. ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ.
ವಿದೇಶಗಳಲ್ಲಿರುವ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸುಮಾರು 1000 ಡಿಎನ್ಎ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು
ಡಿಎನ್ಎ ಪರೀಕ್ಷೆಗಳ ನಂತರ ಶವಗಳನ್ನು ಹಸ್ತಾಂತರಿಸಲಾಗುವುದು. ಪರಿಶೀಲನಾ ಸಭೆಯಲ್ಲಿ ಪ್ರತಿಯೊಂದು ಅಂಶವನ್ನು ಚರ್ಚಿಸಲಾಗಿದ್ದು ವಿಮಾನಯಾನ ಸಚಿವರು ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದ್ದಾರೆ.













































