
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥ
ನೀಡಲಿದ್ದು ಅದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಿತು.
ಇಂದು (ಜೂ.14 ) ರಂಸು ದೇವಾಲಯದಲ್ಲಿ ಶಾಸ್ತ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಿದ್ದು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ್ಯ ನೀಡಿಕೆ ನಡೆಯಿತು.
ಈ ಸಂದರ್ಭದಲ್ಲಿ ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಳಿ, ರಥಶಿಲ್ಪಿ ರಾಜಗೋಪಾಲ್ ಆಚಾರ್ , ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದಾರೆ.
ನಂತರ ರಥ ನಿರ್ಮಾಣಕ್ಕೆ ಸಾಂಕೇತಿಕವಾಗಿ ಬೆಳ್ಳಿ ಮತ್ತು, ಮರ ಹಸ್ತಾಂತರ ನಡೆಯಿತು.













































