ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ,ಎನ್ ಐಎ ತಂಡ ಮಂಗಳೂರಿಗೆ ಆಗಮನ

Picture of Savistara

Savistara

Bureau Report

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್‌ ಪಿ ಪವನ್‌ ಕುಮಾ‌ರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದ್ದು ಅದರಂತೆ ಇಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿಯೂ ಹೊರಬಿದ್ದಿದೆ.

[t4b-ticker]
error: Content is protected !!