
ಗುರುವಾರ(ಜೂ. 12) ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು.
ದುರಂತದಲ್ಲಿ ಕನಿಷ್ಠ 265ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ವಾರ್ನರ್, ವಿಮಾನದಲ್ಲಿನ ಸಮಸ್ಯೆಗಳ ಬಗ್ಗೆ ಪೈಲಟ್ಗಳು, ಎಂಜಿನಿಯರ್ಗಳು ಮತ್ತು ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದರು. ಅದರ ಬಗ್ಗೆ ಕಂಪನಿಯ ಆಡಳಿತ ಮಂಡಳಿಯ ಗಮನಕ್ಕೂ ತಂದಿದ್ದರು. ಆದರೂ ನಿರ್ಲಕ್ಷಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತ ಏರ್ ಇಂಡಿಯಾ ಕಂಪನಿಯ ಮಾಜಿ ಉದ್ಯೋಗಿ ವಿವೇಕ್ ಎಂಬುವವರ ಹಳೆಯ ಪೋಸ್ಟ್ವೊಂದನ್ನು ವಾರ್ನರ್ ಮರು ಹಂಚಿಕೊಂಡಿದ್ದಾರೆ.













































