
ಸುಳ್ಯದ ಹಳೆಗೇಟು ಬಾಟಾ ಶೋರೂಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡುತ್ತಿದ್ದ ಅಶ್ಪಕ್ ವಿರುದ್ಧ ದಲಿತ ನಿಂದನೆ ಕಾಯ್ದೆಯ ಅಡಿಯಲ್ಲಿ ಕೇಸು ದಾಖಲಿಸಿ ಬಂಧಿಸಿದ್ದು ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಸುಳ್ಯ ತಾಲೂಕಿನಲ್ಲಿ ಕೂಡ ಹಿಂದೂ ಹುಡುಗಿಯರು ಲವ್ ಜಿಹಾದ್ ಗೆ ಬಲಿಯಾಗುತ್ತಿದ್ದು ಕಂಡು ಬಂದಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಳ್ಯ ಬಿಜೆಪಿ ಎಸ್ಸಿ ಮೋರ್ಚಾ ಪೊಲೀಸ್ ಇಲಾಖೆಗೆ ಒತ್ತಯಿಸಿದೆ. ಅಧ್ಯಕ್ಷ ವಿಜಯ ಅಲಡ್ಕ, ಪ್ರಧಾನ ಕಾರ್ಯದರ್ಶಿ ಜಿ ಜಗನ್ನಾಥ ಜಯನಗರ ಮಾಧ್ಯಮಕ್ಕೆ ತಿಳಿಸಿದ್ದಾರೆ.













































