ನಾವು ಅಧಿಕಾರಕ್ಕೆ ಬಂದರೆ ಅರೆಸೆಸ್ಸ್ ಬ್ಯಾನ್ ಮಾಡ್ತೇವೆ : ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ

Picture of Savistara

Savistara

Bureau Report

ಬೆಂಗಳೂರು (ಜೂ.30): ನಾವು ಈ ಹಿಂದೆ ಆರ್‌ಎಸ್‌ಎಸ್ ಅನ್ನು 2 ಬಾರಿ ಬ್ಯಾನ್ ಮಾಡಿದ್ದೆವು. ಅಮೇಲೆ ನಮ್ಮ ಕೈಕಾಲು ಹಿಡಿದು ಬ್ಯಾನ್ ವಾಪಸ್ ಮಾಡಿ ಅಂತ ಬಂದಿದ್ದರು. ಆಗ ಬ್ಯಾನ್ ತೆಗೆದಿದ್ದೇ ತಪ್ಪಾಯ್ತು. ಮುಂದೆ ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರ್‌ಎಸ್‌ಎಸ್ (RSS) ಬ್ಯಾನ್ ಮಾಡುವ ತೀರ್ಮಾನ ಮಾಡುತ್ತೇವೆ ಎಂದು ತಂತ್ರಜ್ಞಾನ ಹಾಗೂ ಮಾಹಿತಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸಂವಿಧಾನದಿಂದ ಜಾತ್ಯಾತೀತ ಮತ್ತು ಸಮಾಜವಾದಿ ಪದ ತೆಗೆಯಬೇಕು ಎಂದು ಆರ್‌ಎಸ್‌ಎಸ್ ಮುಖಂಡ ಹೊಸಬಾಳೆ ಅವರು ಆಗ್ರಹ ಮಾಡಿದ ವಿಚಾರದ ಬಗ್ಗೆ ಮಾತನಾಡಿ, ಹೊಸಬಾಳೆ ಅವರು ಯಾವ ಸ್ಕೂಲ್ ಆಫ್ ಥಾಟ್ ಇಂದ ಬರ್ತಾರೆ. ಆರ್‌ಎಸ್‌ಎಸ್ ಹಿನ್ನಲೆಯಿಂದ ಬರುತ್ತಾರೆ. ಆರ್‌ಎಸ್‌ಎಸ್‌ನಲ್ಲಿ ಜಾತ್ಯಾತೀತೆ, ಸಮಾನತೆ, ಸಮಾಜವಾದಿ ಬಗ್ಗೆ ಅಲರ್ಜಿ ಇದೆ. ಆ ಸಂಸ್ಥೆ ಹುಟ್ಟಿದಾಗಿನಿಂದ ಸಂವಿಧಾನ, ಸಮಾನತೆ, ಆರ್ಥಿಕ ಸಮಾನತೆ ಬಗ್ಗೆ ಅಲರ್ಜಿ ಇದೆ. ಈಗ ಅದನ್ನ ಪುನರ್ ಉಚ್ಚಾರ ಮಾಡ್ತಿದ್ದಾರೆ. ಆರ್‌ಎಸ್‌ಎಸ್ ಸಿದ್ದಾಂತವನ್ನ ನಾವು ಮೊದಲಿನಿಂದಲೂ ವಿರೋಧ ಮಾಡ್ತಿದ್ದೇವೆ. ಈಗಲೂ ಮಾಡ್ತೀವಿ ಎಂದರು.

ಈ ಹಿಂದೆ ನಾವು ಎರಡು ಬಾರಿ ಆರ್‌ಎಸ್‌ಎಸ್ ಅವರನ್ನ ಬ್ಯಾನ್ ಮಾಡಿದ್ದೆವು. ಅಮೇಲೆ ಅವರು ನಮ್ಮ ಕೈಕಾಲು ಹಿಡಿದು ಬ್ಯಾನ್ ವಾಪಸ್ ಮಾಡಿ ಅಂತ ಬಂದಿದ್ದರು. ಆದರೆ, ಆಗ ನಾವು ಬ್ಯಾನ್ ತೆಗೆದಿದ್ದೇ ತಪ್ಪಾಯ್ತು. ಮುಂದೆ ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ RSS ಬ್ಯಾನ್ ಮಾಡೋ ಬಗ್ಗೆ ನೋಡೋಣ ಎಂದು ಹೇಳಿದರು. ಈ ಮೂಲಕ ದೇಶದಲ್ಲಿ ಆರ್‌ಎಸ್‌ಎಸ್ ಬ್ಯಾನ್ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!