ವಿಶ್ವ ಹಿಂದೂ ಪರಿಷತ್‌ ಸುಳ್ಯ ಪ್ರಖಂಡದ ನೂತನ ಅಧ್ಯಕ್ಷರಾಗಿ ಕೃಷಿಕ ಶ್ರೀಕಾಂತ್ ಗೋಳ್ವಾಲ್ಕರ್ ನೇಮಕ

Picture of Savistara

Savistara

Bureau Report

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ನೂತನ ಅಧ್ಯಕ್ಷರಾಗಿ ಆಲೆಟ್ಟಿಯ ಗಡಿ ಪ್ರದೇಶವಾಗಿರುವ ಕಲ್ಲಪಳ್ಳಿ ಪರಿಸರದ ನಿವಾಸಿ ಕೃಷಿಕ ಶ್ರೀಕಾಂತ್ ಗೋಳ್ವಾಲ್ಕರ್ ರವರು ಆಯ್ಕೆಯಾಗಿರುತ್ತಾರೆ.

ಪುತ್ತೂರಿನ ರಾಘವೇಂದ್ರ ಮಠ ಕಲ್ಲಾರೆಯಲ್ಲಿ ಜು.1 ರಂದು ಹಿಂದೂ ಮುಖಂಡರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರ ಆಯ್ಕೆಯ ಕುರಿತು ಅಧಿಕೃತ ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಡಾ.ಕೃಷ್ಣ ಪ್ರಸನ್ನ, ಪ್ರವೀಣ್‌ ನೆರಿಯ, ಸೋಮಶೇಖರ ಪೈಕ, ಪ್ರಮೋದ್,ಪೂವಪ್ಪ, ನವೀನ್ ಎಲಿಮಲೆ ಮತ್ತಿತರರು ಉಪಸ್ಥಿತರಿದ್ದರು.ಕಳೆದ ಅವಧಿಯಲ್ಲಿ ಸೋಮಶೇಖರ ಪೈಕ ರವರು ಅಧ್ಯಕ್ಷರಾಗಿದ್ದು ಇದೀಗ ತೆರವಾದ ಸ್ಥಾನಕ್ಕೆ ಶ್ರೀಕಾಂತ್ ರವರನ್ನು ಆಯ್ಕೆ ಮಾಡಲಾಗಿದೆ. ಇವರು ಓರ್ವ ಪ್ರಗತಿಪರ ಕೃಷಿಕರಾಗಿದ್ದುಕೊಂಡು ವಿಶ್ವ ಹಿಂದೂ ಪರಿಷತ್ ಆಲೆಟ್ಟಿ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಕಲ್ಲಪಳ್ಳಿ ಬಿಜೆಪಿ ಬೂತ್‌ ಸಮಿತಿಅಧ್ಯಕ್ಷರಾಗಿ, ಸ್ಥಳೀಯ ಆದರ್ಶ ಕ್ರೀಡಾ ಮತ್ತು ಕಲಾ ಸಂಘದ ಪದಾಧಿಕಾರಿಯಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಾಗಿಯೂ ಗುರುತಿಸಿಕೊಂಡಿರುತ್ತಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!