ಐಎಸ್‌ಎಸ್‌ನಿಂದ ಭೂಮಿ ನೋಡುವುದೇ ಸಂಭ್ರಮ: ಶುಭಾಂಶು ಶುಕ್ಲಾ

Picture of Savistara

Savistara

Bureau Report

ನವದೆಹಲಿ: ‘ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದ (ಐಎಸ್‌ಎಸ್‌) ವೀಕ್ಷಣಾ ಸ್ಥಳದಿಂದ ಭೂಮಿಯನ್ನು ನೋಡುವುದೇ ‘ಆ್ಯಕ್ಸಿಯಂ-4′ ಯೋಜನೆಯ ರೋಮಾಂಚನದ ಕ್ಷಣ’ ಎಂದು ಭಾರತ ಗಗನಯಾನಿ ಶುಭಾಂಶು ಶುಕ್ಲಾ ಶುಕ್ರವಾರ ಹೇಳಿದರು.

‘ಆ್ಯಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಶುಕ್ಲಾ ಮತ್ತು ಇತರ ಮೂವರು ಐಎಸ್‌ಎಸ್ ತಲುಪಿ ಒಂದು ವಾರ ಪೂರ್ಣಗೊಂಡಿದೆ. ಶುಕ್ರವಾರ ಅವರು ರಜೆ ಪಡೆದಿದ್ದು, ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಮಾತನಾಡಿದರು.ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರದಲ್ಲಿ (ಯುಆರ್‌ಎಸ್‌ಸಿ) ವಿಜ್ಞಾನಿಗಳೊಂದಿಗೆ ಎಚ್‌ಎಎಂ ರೇಡಿಯೊ ಸಂಪರ್ಕದ ಮೂಲಕ ಮಾತನಾಡಿದ ಶುಕ್ಲಾ ಅವರು, ‘ವಿವಿಧ ದೇಶಗಳ ಖಾದ್ಯಗಳು ಇದ್ದು, ಎಲ್ಲರೂ ಹಂಚಿಕೊಂಡು ತಿನ್ನುತ್ತಿದ್ದೇವೆ. ಮಾವಿನ ರಸ, ಕ್ಯಾರೆಟ್ ಹಲ್ವಾ, ಹೆಸರು ಬೇಳೆ ಹಲ್ವಾ ಮತ್ತು ಇತರೆ ದೇಶಗಳ ತಿನಿಸುಗಳನ್ನು ಸವಿದೆವು’ ಎಂದು ತಿಳಿಸಿದರು.“ಒಂದು ಬಾಹ್ಯಾಕಾಶ ಯೋಜನೆಯ ಯಶಸ್ಸಿಗಾಗಿ ನಾಸಾ, ಇಸ್ರೋ, ಸ್ಪೇಸ್ ಎಕ್ಸ್, ಆಕ್ಸಿಯಂ ಎಲ್ಲವೂ ಒಗ್ಗೂಡಿವೆ. ಜಾಗತಿಕ ಸಹಭಾಗಿತ್ವದಿಂದ ಈ ಯೋಜನೆ ಸಾಧ್ಯವಾಗುತ್ತಿದೆ’ ಎಂದು ಶುಕ್ಲಾ ಅಭಿಪ್ರಾಯಪಟ್ಟರು.

[t4b-ticker]
error: Content is protected !!