“ರಸ್ತೆ ಬೇಕು ಅಂದ್ರೆ ಅಕ್ಕಿ ನಿಲ್ಲಿಸಬೇಕಾಗುತ್ತೆ ” ರೈತರ ಪ್ರಶ್ನೆಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ

Picture of Savistara

Savistara

Bureau Report

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರಾವಣಿಕದಲ್ಲಿ ಶನಿವಾರ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೈತರೊಬ್ಬರು, ‘ನಮ್ಮ ಹೊಲಕ್ಕ ಹೋಗುವ ರಸ್ತೆ ಮಾಡಿಕೊಡ್ರಿ’ ಎಂದು ಮನವಿ ಮಾಡಿದರು” ನಿಂಗೆ ರಸ್ತೆ ಬೇಕು ಅಂದರೆ ಅಕ್ಕಿ, ಎಲ್ಲವೂ ಬಂದ್ ಮಾಡೋಕೆ ಸಿಎಂ ಸಿದ್ದರಾಮಯ್ಯಗೆ ಸಲಹೆ ಕೊಡ್ತೀನಿಯೆಂದು ರಾಯರೆಡ್ಡಿ ಹೇಳಿದರು.ಮಹಿಳೆಯರಿಗೆ ಹಣ ಕೊಡುತ್ತೀರಿ, ನಮಗೆ ರಸ್ತೆ ಮಾಡಿಕೊಡಿ ಎಂದು ಕೇಳಿದಾಗ, ಇನ್ನೂ ಮೂರು ವರ್ಷ ಸಮಯವಿದೆಯೆಂದು ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ

[t4b-ticker]
error: Content is protected !!