₹473 ಕೋಟಿ ವೆಚ್ಚದ ಸಿಗಂದೂರು ಕೇಬಲ್ ಸೇತುವೆ ಜುಲೈ 14ಕ್ಕೆ ಲೋಕಾರ್ಪಣೆ

Picture of Savistara

Savistara

Bureau Report

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.

ಸೇತುವೆಯ ಬಗ್ಗೆ ಹಾಗೂ ನಿರ್ಮಾಣದ ಬಗ್ಗೆ ರಾಜ್ಯ ಬಿಜೆಪಿ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡು ಅತ್ಯಾಧುನಿಕ ಸಿಗಂದೂರು ಕೇಬಲ್ ಸೇತುವೆ ಎಂದು ಹೇಳಿದೆ.ಈಗಾಗಲೇ ಸೇತುವೆ ಉದ್ಘಾಟನೆಗೆ ತಯಾರಿ ನಡೆದಿದ್ದು ಸೇತುವೆ ನಿರ್ಮಾಣದ ಕ್ರೆಡಿಟ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲಿ ಜೋರಾಗಿ ನಡೆದಿದೆ.ಸೇತುವೆ ಉದ್ಘಾಟನೆಯ ಸಭಾ ಕಾರ್ಯಕ್ರಮ ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆಯುವುದು ನಿಶ್ಚಯವಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಸಭೆ ನಡೆಯುವ ಸ್ಥಳವನ್ನು ಅಂತಿಮಗೊಳಿಸಿದ್ದಾರೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಲಾದ ಜೋಶಿ ಅವರು ಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಆಗಮಿಸುವ ಸಾಧ್ಯತೆಯಿದೆ.ಕೇಂದ್ರ ಸಚಿವರು ಜುಲೈ 14ರಂದು ಬೆಳಿಗ್ಗೆ ಸಿಗಂದೂರು ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿ ಸೇತುವೆಯನ್ನು ಉದ್ಘಾಟಿಸಿ, ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಸೇತುವೆ ನಿರ್ಮಾಣದ ವಿವರಗಳುಅಂಬಾರಗೋಡ್ಲು ಮತ್ತು ಕಳಸವಳ್ಳಿ (ಸಿಗಂದೂರು) ಸೇತುವೆಯ ವಿವರಗಳು..

* ಟೆಂಡ‌ರ್ ಮೊತ್ತ – ₹473 ಕೋಟಿ

* ಕಾಮಗಾರಿ ಪ್ರಾರಂಭವಾದ ದಿನ – 2019ರ ಡಿಸೆಂಬರ್ 12

* ಕಾಮಗಾರಿ ಮುಕ್ತಾಯದ ದಿನ- 2025ರ ಜುಲೈ 14

* ಕಾಮಗಾರಿ ನಿರ್ವಹಿಸಿದ ಏಜೆನ್ಸಿ – ದಿಲೀಪ್ ಬಿಲ್ಡ್ ಕಾನ್

* ಸೇತುವೆಯ ಉದ್ದ – 2125 ಮೀಟರ್

* ಸೇತುವೆಯ ಅಗಲ – 16 ಮೀಟರ್ (ಜೊತೆಗೆ ಫುಟ್‌ಪಾತ್ 2×1.5)

* ಸಂಪರ್ಕ ರಸ್ತೆ – 1.05 ಕಿ.ಮೀ ನಿಂದ 3 ಕಿ.ಮೀ

* ತಳಪಾಯ- 164 ಪೈಲ್ಸ್

* ಉಕ್ಕಿನ ಕೇಬಲ್ ಉದ್ದ – 740 ಮೀಟರ್

* ಕೇಬಲ್ ಎತ್ತರ- 38.50 ಮೀಟರ್

[t4b-ticker]
error: Content is protected !!