
ಸುಳ್ಯ: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಕಾರ್ಯಕರ್ತರ ಭೇಟಿ ಮತ್ತು ಅಹವಾಲು ಸ್ವೀಕರಿಸಿ ಬಿರುಸಿನ ಪ್ರವಾಸ ಕೈಗೊಂಡರು.

ಬೆಳಿಗ್ಗೆ ಕೊಡಿಯಾಲ ದಲ್ಲಿ ಇಂಟರ್ ಲಾಕ್ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರೆ ಬೆಳ್ಳಾರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗೌರಿಪುರಂ ಲ್ಲಿ ಕಾರ್ಯಕರ್ತರ ಭೇಟಿ ಮತ್ತು ಅಹವಾಲು ಸ್ವೀಕರಿಸಿದರು ನಂತರ ಅಲೆಟ್ಟಿ ಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಸಾರ್ವಜನಿಕ ರ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಕಾರ್ಯಕರ್ತರ ಸಭೆ ನಡೆಸಿದರು, ನಂತರ ಗುತ್ತಿಗಾರು ಮಹಾಶಕ್ತಿ ಕೇಂದ್ರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಶಾಸಕಿ ಭಾಗೀರಥಿ ಮುರುಳ್ಯ,ಮಾಜಿ ಸಚಿವ ಯಸ್ ಅಂಗಾರ,ಬಿಜೆಪಿ ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ಆರ್ ಕೆ ಭಟ್, ವಿ ತೀರ್ಥರಾಮ,ವಿನಯ್ ಕುಮಾರ ಕಂದಡ್ಕ ಮುಂತಾದವರು ಉಪಸ್ಥಿತರಿದ್ದರು.ಕಳೆದ ಬಾರಿ ಸಂಸದರು ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿ ಯಲ್ಲಿ ಸಭೆ ನಡೆಸಿ ಕಾರ್ಯಕರ್ತರನ್ನು ಭೇಟಿಯಾಗಿದ್ದರು.















































