ದ. ಕ ಉಡುಪಿಯಲ್ಲಿ ಭಾರಿ ವರುಣನ ಆರ್ಭಟ : ಆರೆಂಜ್ ಅಲರ್ಟ್‌ ಘೋಷಣೆ

Picture of Savistara

Savistara

Bureau Report

ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಪೂರ್ತಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ವರದಿಯಾಗಿದ್ದು, ಕಡಬ, ಉಳ್ಳಾಲ ಮತ್ತು ಬಂಟ್ವಾಳ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಅಧಿಕಾರಿಗಳು ರಜೆ ಘೋಷಿಸಿದ್ದಾರೆ.

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ, ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಪಾಣೆಮಂಗಳೂರು, ಬಿಳಿಯೂರು ಮತ್ತು ಅರಳ ಗ್ರಾಮಗಳಲ್ಲಿ ಮನೆಗಳಿಗೆ ಸಣ್ಣಪುಟ್ಟ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.ವಿಟ್ಲಕ್ಕೆ ಹತ್ತಿರವಿರುವ ವೀರಕಂಬ ಬಳಿ, ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಯಿತು. ಮಂಗಳೂರು ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಹಲವಾರು ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಮಡಂತ್ಯಾರು, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಪಂಜ, ಕೊಲ್ಲಮೊಗ್ರು, ಸುರತ್ಕಲ್, ಮೂಡುಬಿದಿರೆ, ಬಜ್ಜೆ, ಕಟೀಲು, ವಿಟ್ಲ, ಬಂಟ್ವಾಳ, ಕನ್ಯಾನ, ಪೆರುವಾಯಿ ಸೇರಿದಂತೆ ಇತರೆಡೆ ಭಾರಿ ಮಳೆಯಾಗಿದೆ.

ಭಾರತ ಹವಾಮಾನ ಇಲಾಖೆ (ಐಎಂಡಿ) ಜುಲೈ 16 ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಜುಲೈ 17 ಮತ್ತು 18 ಕ್ಕೂ ಆರೆಂಜ್ ಎಚ್ಚರಿಕೆಗಳನ್ನು ಘೋಷಿಸಲಾಗಿದೆ.

[t4b-ticker]
error: Content is protected !!