ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ರಾಯಚೂರು, ಬಳ್ಳಾರಿ , ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಸಂಘಟನ್ಮಾತಕ ಸಭೆ ನಡೆಯಿತು.ಪಕ್ಷವನ್ನು ಸಂಘಟಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ರಣ ತಂತ್ರ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ, ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿಚರ್ಚೆ ನಡೆಸಲಾಯಿತು. ಈ ವೇಳೆ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಜೊತೆಯಾಗಿ ಕೈಜೋಡಿಸಿ ಒಗ್ಗಟ್ಟು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜ್ಯ ಸಹ ಉಸ್ತುವಾರಿಗಳಾದ ಶ್ರೀ ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ , ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ಶಾಸಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿ, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಹೆಚ್ ಪಾಟೀಲ್, ಶಾಸಕರಾದ ಶ್ರೀ ಮಾನಪ್ಪ ವಜ್ಜಲ್, ಶ್ರೀ ಡಾ.ಶಿವರಾಜ್ ಪಾಟೀಲ್, ಶ್ರೀ ಕೃಷ್ಣಾ ನಾಯಕ್,

ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳೀಕೆರೆ, ಶ್ರೀ ದಿವಾಕರ್, ಮಾಜಿ ಶಾಸಕರಾದ ಶ್ರೀ ಸೋಮಶೇಖರ್ ರೆಡ್ಡಿ, ಶ್ರೀ ಪರಣ್ಣ ಮುನವಳ್ಳಿ, ಶ್ರೀ ಪ್ರತಾಪ್ ಗೌಡ ಪಾಟೀಲ್, ಶ್ರೀ ಬಸವರಾಜ್ , ಶ್ರೀ ಗಂಗಾಧರ ನಾಯಕ್, ಜಿಲ್ಲಾಧ್ಯಕ್ಷರಾದ ಶ್ರೀ ಬಸವರಾಜ ದಡೇಸುಗೂರು, ಮುಖಂಡರಾದ ಶ್ರೀ ಬಸವರಾಜ್ ಕ್ಯಾವಟರ್, ಶ್ರೀ ಕರಿಯಪ್ಪ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.














































