ಧರ್ಮಸ್ಥಳ ಕೇಸಲ್ಲಿ ತನಿಖೆಗೆ ಮುನ್ನ ತೀರ್ಪು ಸರಿಯಲ್ಲ: ಸಿ.ಟಿ. ರವಿ

Picture of Savistara

Savistara

Bureau Report

ಪಾರದರ್ಶಕವಾಗಿ ಎಸ್‌ಐಟಿ ತನಿಖೆ ನಡೆಯಲಿ; ಕ್ಷೇತ್ರದ ತೇಜೋವಧೆ ಮಾಡಲು ನಾವು ಬಿಡಲ್ಲ

ಬೆಂಗಳೂರು: ಧರ್ಮಸ್ಥಳ ವಿಷಯಕ್ಕೆ ಸಂಬಂಧಪಟ್ಟಂತೆರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ತನಿಖೆ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ನಡೆಯಲಿ. ತಪ್ಪು ಯಾರೇ ಮಾಡಿದ್ದರು ತಪ್ಪಿಗೆ ಶಿಕ್ಷೆಯಾಗಲಿ. ತನಿಖೆಗೆ ನಾವು ಮಧ್ಯಪ್ರವೇಶಿಸುವುದಿಲ್ಲ. ಆದರೆ, ತನಿಖೆಗೆ ಮುನ್ನವೇ ಕೆಲವರು ತನಿಖೆ ನಡೆಸಿ ತೀರ್ಪು ಕೊಡುವ ಪ್ರವೃತ್ತಿ ಸ್ವೀಕಾರಾರ್ಹವಲ್ಲ ಎಂದು ಸಿ.ಟಿ. ರವಿ ತಿಳಿಸಿದರು.ಧರ್ಮಸ್ಥಳ ಎಂಬ ಸಂಸ್ಥೆಯನ್ನೇ ಅನುಮಾನಿಸುವಮ ಸಂಸ್ಥೆಯ ಮುಖ್ಯಸ್ಥರನ್ನೇ ತಪ್ಪಿತಸ್ಥರೆಂಬಂತೆ ಬಿಂಬಿಸುವ ಷಡ್ಯಂತ್ರದ ವಿರುದ್ಧ ನಾವಿದ್ದೇವೆ. ಧರ್ಮಸ್ಥಳ ಟ್ರಸ್ಟ್‌ ಚೋಳರ ಕಾಲದ 293 ದೇವಾಲಯಗಳನ್ನು ಪುನರ್‌ ನಿರ್ಮಾಣ ಮಾಡಿದೆ. ಸ್ವಯಂಸೇವಾ ಸಂಘಗಳ 55 ಲಕ್ಷ ಸದಸ್ಯರು ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜೊತೆಗೆ ಜೋಡಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. 900 ಕೆರೆಗಳ ಜೀರ್ಣೋದ್ಧಾರ ಕೆಲಸವನ್ನು ಮಾಡಿದೆ.

ಧರ್ಮಸ್ಥಳದ ತೇಜೋವಧೆ ಮಾಡುವುದನ್ನು ಅಥವಾ ವಿಚಾರಣೆ ಇಲ್ಲದೆ ಗಲ್ಲಿಗೇರಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇನ್ನು ಮುಂದೆಯೂ ಇದನ್ನು ಮುಂದುವರಿಸಿದರೆ ನಾವು ಬಿಡುವುದಿಲ್ಲ. ಸಜ್ಜನರ ಮೌನ ದುರ್ಜನರಿಗೆ ದಾರಿಯಾಗುವುದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!