ಇವತ್ತಿನಿಂದ ಧರ್ಮಸ್ಥಳ ಕೇಸ್​ನ ಅಸಲಿ ರಹಸ್ಯ ಹುಡುಕಾಟ.. SITಗೆ ಹೆಚ್ಚುವರಿಯಾಗಿ 20 ಅಧಿಕಾರಿಗಳ ನೇಮಕ

Picture of Savistara

Savistara

Bureau Report

ಧರ್ಮಸ್ಥಳ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಇಂದಿನಿಂದ ತನಿಖಾ ತಂಡ ಅಖಾಡಕ್ಕೆ ಇಳಿಯಲಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಇಂದು(ಜುಲೈ 23) ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅಧಿಕೃತವಾಗಿ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಲಿದೆ.ಪ್ರಕರಣ ತನಿಖೆಯು ಎಸ್​ಐಟಿಗೆ ಸವಾಲಿಗೆ ಕೆಲಸವಾಗಲಿದೆ. ಹಲವು ಆಯಾಮಗಳನ್ನು ತನಿಖೆ ನಡೆಸಲಿದ್ದು, ಇದಕ್ಕಾಗಿ ಪ್ರಣವ್ ಮೊಹಾಂತಿ‌ ನೇತೃತ್ವದ ಎಸ್​​ಐಟಿ ತಂಡಕ್ಕೆ 20 ಮಂದಿ ಅಧಿಕಾರಿ, ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.ನಾಲ್ವರ ತಂಡಕ್ಕೆ ಹೊಸ ಟೀಂ ನಿಯೋಜನೆ ಮಾಡಿದ ಡಿಜಿಪಿ ಸಲೀಂಎಂ.ಎನ್.ಅನುಚೇತ್, ಸೌಮ್ಯಲತಾ, ಜಿತೇಂದ್ರ ಕುಮಾರ್, ಸೈಮನ್ ನೇಮಕಹೆಚ್ಚುವರಿಯಾಗಿ 20 ಮಂದಿ ಅಧಿಕಾರಿ, ಸಿಬ್ಬಂದಿ ನಿಯೋಜನೆಪ್ರಣವ್ ಮೊಹಾಂತಿ‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಕ್ಕೆ ನಿಯೋಜನೆದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದ ಪೊಲೀಸ್​ ಅಧಿಕಾರಿಗಳುಐವರು ಐಪಿಎಸ್​, ಇಬ್ಬರು ಡಿಎಸ್​ಪಿ, 6 ಜನ ಇನ್ಸ್​ಪೆಕ್ಟರ್​ಗಳು8 ಮಂದಿ ಸಬ್​​ಇನ್ಸ್​ಪೆಕ್ಟರ್​ ಸೇರಿ ಒಟ್ಟು 20 ಹೆಚ್ಚುವರಿಗೆ ಅಧಿಕಾರಿಗಳು

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!